DVP
ದಲಿತ ವಿದ್ಯಾರ್ಥಿ ಪರಿಷತ್ ಶೋಷಿತ, ದಮನಿತ ವಿಧ್ಯಾರ್ಥಿಗಳ ಹಕ್ಕುಗಳಿಗಾಗಿ ಹೋರಾಡುತ್ತಿರುವ ಸಂಘಟನೆ ಆಗಿದೆ.
ದಲಿತ ವಿದ್ಯಾರ್ಥಿ ಪರಿಷತ್ ಸಮಾಜಿಕ ಸಂಘಟನೆಯಾಗಿದ್ದು, ಇದು ಶೋಷಿತ, ದಮನಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ವಿಧ್ಯಾರ್ಥಿ, ಯುವಜನರ ಹಕ್ಕುಗಳಿಗಾಗಿ ಮತ್ತು ಅವರ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗಾಗಿ ಶ್ರಮಿಸುತ್ತ ಹೋರಾಡುತ್ತಿರುವ ಸಂಘಟನೆಯಾಗಿದೆ.
09/06/2026
ಇಂದು ದಲಿತ ವಿದ್ಯಾರ್ಥಿ ಪರಿಷತ್ ಮಸ್ಕಿ ತಾಲೂಕ ಸಮಿತಿ ವತಿಯಿಂದ ಮಸ್ಕಿ ತಹಸೀಲ್ದಾರ್ ಕಚೇರಿ ಶಿರಸ್ತೆದಾರ್ ಇವರಿಗೆ ಮನವಿ ಸಲ್ಲಿಸಿ ಮಸ್ಕಿಯ ಹಾಲಾಪುರ ರಸ್ತೆಯಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳ ಮೂಲಭೂತ ಸೌಕರ್ಯಗಳು ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಹಾಗೂ ವಿದ್ಯಾರ್ಥಿಗಳಿಗೆ ವಂಚಿಸುತ್ತಿರುವ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಹೋರಾಟ ನಡೆಸಲಾಯಿತು.
ಈ ವೇಳೆ ತಾಲ್ಲೂಕಿನ ಸಂಚಾಲಕರಾದ ಮೌನೇಶ ತುಗ್ಗಲದಿನ್ನಿ ಅಲ್ಲದೇ ಹಲವು ಮುಖಂಡರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
09/06/2026
ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಮಿತಿ ರಾಯಚೂರು ವತಿಯಿಂದ ಸಮಾಜ ಕಲ್ಯಾಣ ಇಲಾಖೆ ರಾಯಚೂರು ಕಚೇರಿ ಅಧೀಕ್ಷಕರಿಗೆ ಮನವಿ ಸಲ್ಲಿಸಿ, ಈಗಾಗಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರವೇಶ ಪ್ರಾರಂಭವಾಗಿರುವುದರಿಂದ ಸಮಾಜ ಕಲ್ಯಾಣ ಇಲಾಖೆಯ ಕೆಲವು ಪಿಯುಸಿ ವಸತಿ ನಿಲಯವನ್ನು ಇನ್ನೂ ಪ್ರಾರಂಭಿಸದೆ ಇರುವುದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲ ಉಂಟಾಗಿದ್ದು ಜೊತೆಗೆ ರಾಯಚೂರಿನ ಬಿಜನಗೆರ ರಸ್ತೆಯಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ಪದವಿ ಪೂರ್ವ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳು ಇಲ್ಲದೆ ತೀವ್ರ ತೊಂದರೆ ಉಂಟಾಗಿರುವುದರಿಂದ ಕೂಡಲೇ ವಿದ್ಯಾರ್ಥಿಗಳ ಬೇಡಿಕೆ ಈಡೇರಿಸಲು ಒತ್ತಾಯಿಸಿ ನಿಲಯ ಮೇಲ್ವಿಚಾರಕರನ್ನು ಅಮಾನತು ಮಾಡುವಂತೆ ಆಗ್ರಹಿಸಲಾಯಿತು.
09/06/2026
"ದಲಿತರ ಗುಡಿಸಲಿನಲ್ಲಿ ಹೋರಾಟದ ಹಣತೆಯನ್ನು ಹಚ್ಚಿದ್ದೇನೆ, ಅದನ್ನು ಆರದಂತೆ ಕಾಪಾಡಿ..." ಎಂದು ಜಾಗೃತಿಯ ಕರೆನೀಡಿದ, ಕರ್ನಾಟಕ 'ದಲಿತ ಸಂಘರ್ಷ ಸಮಿತಿ'ಯ ಸ್ಥಾಪಕರಾದ ಪ್ರೊ. ಬಿ. ಕೃಷ್ಣಪ್ಪ ಅವರು ಹುಟ್ಟಿದ ದಿನದಂದು ಅವರಿಗೆ ಭೀಮ್ ನಮನಗಳು 🙏
28/05/2026
ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು 💐
22/05/2026
ಸರ್ಕಾರಿ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಆರಂಭಿಸಲು ಮನವಿ
16/05/2026
NEET ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಮನವಿ.
13/05/2026
Kalaburagi | NEET ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ನಿಂದ ಮನವಿ
Kalaburagi | NEET ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ನಿಂದ ಮನವಿ ಕಲಬುರಗಿ: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ನಡೆಯುವ ನೀಟ್ ಪರೀಕ್ಷೆಯಲ್ಲಿ ಪದೇ ಪದೇ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಹಾ.....
13/05/2026
NEET ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮನವಿ
ಕಲಬುರಗಿ DVP : ನೀಟ್ ಪರೀಕ್ಷೆ ಪೇಪರ್ ಸೋರಿಕೆ ಖಂಡಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಪರಿಷತ್ತಿನ ರಾಜ್ಯ ಸಂಚಾಲಕರಾದ ಬಾಲಾಜಿ ಕಾಂಬಳೆ ನೇತೃತ್ವದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಕಛೇರಿ ಸಹಾಯಕರಾದ ಶಿವಪ್ರಭು ಹಿರೇಮಠ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
"ದೇಶಕ್ಕೆ ವೈದ್ಯರನ್ನು ನೀಡುವ ಪವಿತ್ರ ಪರೀಕ್ಷೆಯಲ್ಲಿ ಭ್ರಷ್ಟಾಚಾರ ನುಸುಳಿರುವುದು ದೇಶದ ಆರೋಗ್ಯ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ. ಒಂದು ಬಾರಿ ತಪ್ಪಾದರೆ ಅದು ಅಚಾತುರ್ಯ, ಆದರೆ ಪದೇ ಪದೇ ಸೋರಿಕೆಯಾಗುತ್ತಿರುವುದು ವ್ಯವಸ್ಥೆಯ ವೈಫಲ್ಯ. ಈ ಬಗ್ಗೆ ಸರ್ಕಾರ ಶೀಘ್ರವೇ ಕಠಿಣ ಕಾನೂನು ರೂಪಿಸಬೇಕು," ಬಾಲಾಜಿ ಎಂ ಕಾಂಬಳೆ ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪರಿಷತ್ ನಗರ ಘಟಕದ ಅಧ್ಯಕ್ಷ ಸಚಿನ್, ಮುಖಂಡರಾದ ವೈ.ಎಸ್. ಸಿಂದಗೇರಿ ಅಲ್ಲದೇ ವಿದ್ಯಾರ್ಥಿಗಳಾದ ಆದಿತ್ಯ ಗೊಬ್ಬೆವಾಡ, ಮಹಮದ್ ಅಸ್ಲಮ್, ಬುರಮ್ಮ, ಚನ್ನು ಭಾಗವಹಿಸಿದ್ದರು.
13/05/2026
ಡೋನೆಷನ್ ಹಾವಳಿ ತಡೆಗೆ ನಿನ್ನೆ ರಾಯಚೂರು ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಮನವಿ ನೀಡಲಾಯಿತು.
Click here to claim your Sponsored Listing.
Location
Category
Contact the school
Telephone
Website
Address
Bangalore