21/07/2026
ಡಾ. ಅಂಬೇಡ್ಕರ್ ಶಿಕ್ಷಣ ಮಹಾವಿದ್ಯಾಲಯ ಹಾಗೂ ನಳಂದ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ಸಂಸ್ಥಾಪಕರ ದಿನಾಚರಣೆ ಹಾಗೂ ಮಾನ್ಯ ಶ್ರೀ ಮಲ್ಲಿಕಾರ್ಜುನ ಎಂ. ಖರ್ಗಜೀ ಅವರ 84ನೇ ಜನ್ಮದಿನೋತ್ಸವವನ್ನು 2026ರ ಜುಲೈ 21ರಂದು ಬೆಳಿಗ್ಗೆ 11.00 ಗಂಟೆಗೆ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಮಾಜಸೇವೆ, ಶೈಕ್ಷಣಿಕ ಸಾಧನೆ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಬಿಂಬಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವು ಬಿ.ಎಡ್. ಪ್ರಶಿಕ್ಷಣಾರ್ಥಿನಿಯರಿಂದ ಬುದ್ಧ ಗೀತೆಯೊಂದಿಗೆ ಆರಂಭವಾಯಿತು. ನಂತರ ಡಾ. ಅಂಬೇಡ್ಕರ್ ಶಿಕ್ಷಕರ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಶಿವಣ್ಣ ವಿ. ಟಿ. ಅವರು ಎಲ್ಲ ಗಣ್ಯರು, ಅತಿಥಿಗಳು, ಉಪನ್ಯಾಸಕರು, ಹಾಗೂ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಸಂಸ್ಥಾಪಕರ ದಿನದ ಮಹತ್ವ ಮತ್ತು ಶ್ರೀ ಮಲ್ಲಿಕಾರ್ಜುನ ಎಂ. ಖರ್ಗೆ ಅವರ ಸಮಾಜಮುಖಿ ಸೇವೆಯನ್ನು ಸ್ಮರಿಸಿದರು.
ಇದಾದ ಬಳಿಕ ಭಗವಾನ್ ಬುದ್ಧರ ಭಾವಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ನಂತರ ಕೇಕ್ ಅನಾವರಣ ಮಾಡುವುದರ ಮೂಲಕ ಶ್ರೀ ಮಲ್ಲಿಕಾರ್ಜುನ ಎಂ. ಖರ್ಗಜೀ ಅವರ 84ನೇ ಜನ್ಮದಿನವನ್ನು ಸಂಭ್ರಮಿಸಲಾಯಿತು.
ಮುಂದಿನ ಕಾರ್ಯಕ್ರಮವಾಗಿ 2023–2025ನೇ ಸಾಲಿನ ಬಿ.ಎಡ್. ಮತ್ತು ಎಂ.ಎಡ್. ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಪ್ರತಿಭಾವಂತ ಪ್ರಶಿಕ್ಷಣಾರ್ಥಿಗಳಿಗೆ ಬಹುಮಾನಗಳನ್ನು ಡಾ. ಅಪೂರ್ವ ಟಿ. ಎಂ., ಸಹಾಯಕ ಪ್ರಾಧ್ಯಾಪಕರು ಇವರು ಪ್ರಕಟಿಸಿದರು ಹಾಗೆಯೇ, ನಳಂದ ನ್ಯಾಷನಲ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಕು.ಸರೋಜಾ ಡಿ. ಅವರು ಪಿಯುಸಿ ಪ್ರಥಮ ಹಾಗೂ ದ್ವಿತೀಯ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳ ಹೆಸರನ್ನು ಪ್ರಕಟಿಸಿ, ಅವರ ಸಾಧನೆಯನ್ನು ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ “ಸಂಘ ಮಿತ್ರ” ಕಾಲೇಜು ವಾರ್ಷಿಕ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು. ವಾರ್ಷಿಕ ಸಂಚಿಕೆಯಲ್ಲಿ ಗಣ್ಯರ ಅತಿಥಿ ಲೇಖನಗಳು, ಬೋಧಕ ವೃಂದದ ಲೇಖನಗಳು, ವಿದ್ಯಾರ್ಥಿಗಳ ಶಿಕ್ಷಣ ಕುರಿತ ವಿಚಾರಗಳು, ಸೃಜನಾತ್ಮಕ ಬರಹಗಳು ಹಾಗೂ ವಿದ್ಯಾರ್ಥಿಗಳ ಕಲಾಕೃತಿಗಳನ್ನು ಒಳಗೊಂಡಿರುವುದನ್ನು ಮೆಚ್ಚುಗೆ ವ್ಯಕ್ತಪಡಿಸಲಾಯಿತು.
ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಯೂತ್ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿ ಮಾನವೀಯ ಸೇವೆಯ ಮಹತ್ವವನ್ನು ಸಾರಿದರು. ಭಾರತೀಯ ರೆಡ್ ಕ್ರಾಸ್ ಸೊಸೈಟಿಯಿಂದ ರಕ್ತದಾನ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರಗಳನ್ನು ಪ್ರದಾನ ಮಾಡಲಾಯಿತು. ಪ್ರಮಾಣಪತ್ರ ಸ್ವೀಕರಿಸಿದ ವಿದ್ಯಾರ್ಥಿಗಳ ಹೆಸರನ್ನು ಸಹಾಯಕ ಪ್ರಾಧ್ಯಾಪಕರು ಹಾಗೂ ಯುವ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಡಾ. ಮಂಜಯ್ಯ ಅವರು ಘೋಷಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ. ಶ್ರೀನಿವಾಸ್ ಜಿ. ಕಪ್ಪಣ್ಣ, ಮಾಜಿ ಅಧ್ಯಕ್ಷರು, ಕರ್ನಾಟಕ ನಾಟಕ ಅಕಾಡೆಮಿ, ಸಂಗೀತ ಮತ್ತು ನಾಟಕ ಅಕಾಡೆಮಿ ನವ ದೆಹಲಿ ಹಾಗು ಬಿ ವಿ ಕಾರಥ್ ಪ್ರಶಸ್ತಿ ಪುರಸ್ಕೃತರು, ಬೆಂಗಳೂರು ಅವರು ಮಾತನಾಡಿ ಶ್ರೀ ಮಲ್ಲಿಕಾರ್ಜುನ ಎಂ. ಖರ್ಗೆ ಅವರ ಬಾಲ್ಯದ ಜೀವನ, ಅವರ ಪರಿಶ್ರಮ, ಶಿಸ್ತು ಹಾಗೂ ಮೌಲ್ಯಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು. ಸಮಾಜದ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಶ್ರೀ ಖರ್ಗೆ ಅವರು ಅನೇಕ ಶಿಕ್ಷಣ ಸಂಸ್ಥೆಗಳ ಸ್ಥಾಪನೆ ಹಾಗೂ ಅವುಗಳ ಅಭಿವೃದ್ಧಿಗೆ ನೀಡಿದ ಅಪಾರ ಕೊಡುಗೆಯನ್ನು ವಿವರಿಸಿದರು. ಅಲ್ಲದೆ, ಬುದ್ಧ ವಿಹಾರದ ನಿರ್ಮಾಣದ ಹಿಂದಿನ ಉದ್ದೇಶ, ಅದರ ಐತಿಹಾಸಿಕ ಹಾಗೂ ಸಾಮಾಜಿಕ ಮಹತ್ವ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಾನತೆ, ಶಾಂತಿ ಮತ್ತು ಮಾನವೀಯತೆಯ ತತ್ವಗಳನ್ನು ಸಮಾಜದಲ್ಲಿ ಬಿತ್ತರಿಸುವಲ್ಲಿ ಬುದ್ಧ ವಿಹಾರದ ಪಾತ್ರವನ್ನು ಅರ್ಥಪೂರ್ಣವಾಗಿ ವಿವರಿಸಿದರು.
ಮುಂದುವರೆದು, ಶೈಕ್ಷಣಿಕ ಸಾಲಿನಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ವಿಶೇಷವಾಗಿ ಅಭಿನಂದಿಸಿ, ಅವರ ನಿರಂತರ ಪರಿಶ್ರಮ, ಶಿಸ್ತು ಮತ್ತು ಸಾಧನೆಯ ಮನೋಭಾವ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದು ಹಾರೈಸಿದರು.
ಮತ್ತೋರ್ವ ಮುಖ್ಯ ಅತಿಥಿಗಳಾದ ಶ್ರೀ ಅಗ್ರಹಾರ ಕೃಷ್ಣಮೂರ್ತಿ, ಲೇಖಕರು ಮತ್ತು ವಿಮರ್ಶಕರು, ಕೇಂದ್ರ ಸಾಹಿತ್ಯ ಅಕಾಡೆಮಿ, ಪ್ರಾದೇಶಿಕ ಕಾರ್ಯದರ್ಶಿ(ನಿವೃತ್ತ), ನವ ದೆಹಲಿ ಅವರು ತಮ್ಮ ಭಾಷಣದಲ್ಲಿ ಭಗವಾನ್ ಬುದ್ಧ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಶ್ರೀ ಮಲ್ಲಿಕಾರ್ಜುನ ಎಂ. ಖರ್ಗೆ ಅವರ ಜೀವನ ಮೌಲ್ಯಗಳು, ಚಿಂತನೆಗಳು ಮತ್ತು ಸಮಾಜಮುಖಿ ಸೇವೆಗಳು ಪರಸ್ಪರ ಪೂರಕವಾಗಿವೆ ಎಂದು ವಿವರಿಸಿದರು. ಬುದ್ಧನ ಕರುಣೆ, ಸಮಾನತೆ ಮತ್ತು ಶಾಂತಿಯ ಸಂದೇಶ, ಡಾ. ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯ ಹಾಗೂ ಶಿಕ್ಷಣದ ತತ್ವಗಳು ಮತ್ತು ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಜನಪರ ಸೇವೆ ಹಾಗೂ ಶೈಕ್ಷಣಿಕ ಅಭಿವೃದ್ಧಿಯ ದೃಷ್ಟಿಕೋನ ಒಂದೇ ಆದರ್ಶವನ್ನು ಪ್ರತಿಬಿಂಬಿಸುತ್ತವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶೈಕ್ಷಣಿಕ ವರ್ಷದಲ್ಲಿ ಅತ್ಯುನ್ನತ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಸಾಧನೆಯನ್ನು ಮುಂದುವರಿಸಿಕೊಂಡು ಸಮಾಜಕ್ಕೆ ಆದರ್ಶವಾಗುವಂತೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಇಂದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಪೀಪಲ್ಸ್ ಎಜುಕೇಶನ್ ಸೊಸೈಟಿ, ಕಲಬುರಗಿಯ ಸದಸ್ಯರಾದ ಶ್ರೀ ಮಹಾಂತಪ್ಪ ಸಂಘಾವಿ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಡಾ. ಅಂಬೇಡ್ಕರ್ ಶಿಕ್ಷಣ ಮಹಾವಿದ್ಯಾಲಯದ ಸ್ಥಾಪನೆಯ ಹಿನ್ನೆಲೆ ಹಾಗೂ ಅದರ ಉದ್ದೇಶಗಳನ್ನು ಸಂಕ್ಷಿಪ್ತವಾಗಿ ವಿವರಿಸಿದರು. ಮಹಿಳಾ ಶಿಕ್ಷಣದ ಪ್ರಗತಿಗಾಗಿ ಶ್ರೀ ಮಲ್ಲಿಕಾರ್ಜುನ ಎಂ. ಖರ್ಗೆ ಅವರು ಸಲ್ಲಿಸಿರುವ ಅಮೂಲ್ಯ ಸೇವೆ, ಅವರ ದೂರದೃಷ್ಟಿ ಹಾಗೂ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ನೀಡಿದ ಅಪಾರ ಕೊಡುಗೆಯನ್ನು ಪ್ರಶಂಸಿಸಿದರು.
ಶೈಕ್ಷಣಿಕ ಸಾಧನೆಯಲ್ಲಿ ಅತ್ಯುನ್ನತ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳ ಯಶಸ್ಸಿನ ಹಿಂದೆ ಮಹಾವಿದ್ಯಾಲಯದ ಅಧ್ಯಾಪಕರ ಸಮರ್ಪಿತ ಪರಿಶ್ರಮ, ಗುಣಮಟ್ಟದ ಬೋಧನೆ ಮತ್ತು ಮಾರ್ಗದರ್ಶನವೇ ಪ್ರಮುಖ ಕಾರಣವೆಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ರೀತಿ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದಲ್ಲಿ ಇನ್ನಷ್ಟು ಸಾಧನೆ ಮಾಡಿ, ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡುವಂತೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಪೀಪಲ್ಸ್ ಎಜುಕೇಶನ್ ಸೊಸೈಟಿ, ಕಲಬುರಗಿಯ ಸದಸ್ಯರಾದ ಶ್ರೀ.ಶಿವಶರಣಪ್ಪ ಅನ್ವರ್ ಅವರು ಗೌರವ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವರಾದ ಶ್ರೀ. ಸುರೇಶ್ ಹಾಗೂ ಕಲಬುರಗಿಯ ಶ್ರೀ. ಮಹದೇವಯ್ಯ ಬಿ. ಐ. ಇ.ಸಿಅವರು ಸಹ ಉಪಸ್ಥಿತರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ನಳಂದ ನ್ಯಾಷನಲ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಮಹಾಂತೇಶ್ ಎನ್ ಎಸ್. ಅವರು ವಂದನಾರ್ಪಣೆ ಸಲ್ಲಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯ ಅತಿಥಿಗಳು, ರಕ್ತದಾನಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಎಲ್ಲ ಸಹಯೋಗಿಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದರು.
ಕಾರ್ಯಕ್ರಮವು ಸಂಸ್ಥಾಪಕರ ಆದರ್ಶಗಳು, ಶಿಕ್ಷಣದ ಶ್ರೇಷ್ಠತೆ, ವಿದ್ಯಾರ್ಥಿಗಳ ಸಾಧನೆಗೆ ಗೌರವ ಹಾಗೂ ಸಮಾಜ ಸೇವೆಯ ಮಹತ್ವವನ್ನು ಪ್ರತಿಬಿಂಬಿಸುವಂತಿದ್ದು, ಎಲ್ಲರ ಮನದಲ್ಲಿ ಅಚ್ಚಳಿಯದ ನೆನಪನ್ನು ಮೂಡಿಸಿತು.