18/11/2024
ಜಾತಿ-ಕುಲ ಸೃಷ್ಟಿಸಿರುವ ಸಾಮಾಜಿಕ ತಾರತಮ್ಯ ಮತ್ತು ಅಸಮಾನತೆ ಬಗ್ಗೆ ಕೀರ್ತನೆ-ಕಾವ್ಯಗಳ ಮೂಲಕ ಜನಜಾಗೃತಿಗೊಳಿಸಿದ್ದ ಕನಕ ದಾಸರು ದಾಸಶ್ರೇಷ್ಠರು ಮಾತ್ರವಲ್ಲ, ಒಬ್ಬ ಅಪೂರ್ವ ಸಮಾಜ ಸುಧಾರಕರಾಗಿದ್ದರು.
ಜಾತಿ-ಧರ್ಮದ ದುರ್ಬಳಕೆಯಿಂದಾಗಿ ಇತಿಹಾಸದ ಚಕ್ರ ಹಿಂದಕ್ಕೆ ಚಲಿಸುತ್ತಿದೆಯೇನೋ ಎನ್ನುವ ಆತಂಕ ಕಾಡುತ್ತಿರುವ ಇಂದಿನ ದಿನಗಳಲ್ಲಿ ಕನಕದಾಸರ ಚಿಂತನೆ ನಮ್ಮ ದಾರಿಯ ಬೆಳಕಾಗಬೇಕು.
ಕವಿ, ದಾರ್ಶನಿಕ, ಮಹಾನ್ ಮಾನವತಾವಾದಿ ಕನಕದಾಸರಿಗೆ ನನ್ನ ಭಕ್ತಿ ಪೂರ್ವಕ ನಮನಗಳು.
ದಾಸ ಸಾಹಿತ್ಯದ ಶ್ರೇಷ್ಠ ಭಕ್ತ ಕನಕ ದಾಸರ ಜಯಂತಿಯ ಶುಭಾಶಯಗಳು 💐🙏🏻
#ಕನಕಜಯಂತಿ