Urban Development Department - Karnataka

Urban Development Department - Karnataka Official account of Urban Development Department - Govt of Karnataka

ಬೆಳಗಾವಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ತುರ್ಮುರಿ ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ...
29/07/2026

ಬೆಳಗಾವಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ತುರ್ಮುರಿ ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಳಗಾವಿ ಮಹಾನಗರ ಪಾಲಿಕೆಯ ಈ ಘಟಕದಲ್ಲಿ ಪ್ರತಿದಿನ 238 ಟನ್ ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಲಾಗುತ್ತಿದ್ದು, ಅದರಿಂದ 12–16 ಟನ್ ಸಾವಯವ ಗೊಬ್ಬರ ಉತ್ಪಾದಿಸಿ ರೈತರಿಗೆ ಪೂರೈಸಲಾಗುತ್ತಿದೆ. ಉಳಿದ ತ್ಯಾಜ್ಯದಿಂದ ಉತ್ಪಾದನೆಯಾಗುವ RDF (Refuse Derived Fuel) ಅನ್ನು ಸಿಮೆಂಟ್ ಕಾರ್ಖಾನೆಗಳಿಗೆ ಇಂಧನವಾಗಿ ಬಳಸಲಾಗುತ್ತಿದೆ.

ತ್ಯಾಜ್ಯವನ್ನು ಸಂಪನ್ಮೂಲವನ್ನಾಗಿ ಪರಿವರ್ತಿಸುವ ಇಂತಹ ಪರಿಸರ ಸ್ನೇಹಿ ವ್ಯವಸ್ಥೆಗಳು ಸ್ವಚ್ಛ, ಸುಸ್ಥಿರ ಮತ್ತು ಹಸಿರು ನಗರ ನಿರ್ಮಾಣದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿವೆ.

ಬೆಳಗಾವಿ ಮಹಾನಗರಪಾಲಿಕೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ (BUDA) ಹಾಗೂ ಸ್ಮಾರ್ಟ್ ಸಿಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಬ...
29/07/2026

ಬೆಳಗಾವಿ ಮಹಾನಗರಪಾಲಿಕೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ (BUDA) ಹಾಗೂ ಸ್ಮಾರ್ಟ್ ಸಿಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ನಿರ್ಮಿಸಲಾಗುತ್ತಿರುವ 70 MLD (ಮಿಲಿಯನ್ ಲೀಟರ್ ಪ್ರತಿದಿನ) ಸಾಮರ್ಥ್ಯದ ಒಳಚರಂಡಿ ಸಂಸ್ಕರಣಾ ಘಟಕದ (STP) ಕಾಮಗಾರಿಯ ಸ್ಥಳಕ್ಕೆ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

ಯೋಜನೆಯ ಶೇಕಡಾ 90 ರಷ್ಟು ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಇನ್ನುಳಿದ ಸಣ್ಣಪುಟ್ಟ ಕೆಲಸಗಳು ಅಂತಿಮ ಹಂತದಲ್ಲಿದ್ದು ಯೋಜನೆ ಅನುಷ್ಠಾನದ ಕುರಿತು ಕೂಲಂಕಷವಾಗಿ ಪರಿವೀಕ್ಷಣೆ ನಡೆಸಿ ಘಟಕದ ಪ್ರಸ್ತುತ ಪ್ರಗತಿ ಹಾಗೂ ತಾಂತ್ರಿಕ ವಿವರಗಳನ್ನು ಪಡೆದುಕೊಂಡರು.

ಬೆಳಗಾವಿ ನಗರದ ಮೂಲಸೌಕರ್ಯ ವೃದ್ಧಿ, ಸ್ವಚ್ಛತೆ ಹಾಗೂ ಸಾರ್ವಜನಿಕ ಸೇವೆಗಳ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀ...
29/07/2026

ಬೆಳಗಾವಿ ನಗರದ ಮೂಲಸೌಕರ್ಯ ವೃದ್ಧಿ, ಸ್ವಚ್ಛತೆ ಹಾಗೂ ಸಾರ್ವಜನಿಕ ಸೇವೆಗಳ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸುವರ್ಣ ವಿಧಾನಸೌಧದ ಕೊಠಡಿ ಸಂಖ್ಯೆ 354ರಲ್ಲಿ ಬೆಳಗಾವಿ ಮಹಾನಗರಪಾಲಿಕೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ (BUDA) ಹಾಗೂ ಸ್ಮಾರ್ಟ್ ಸಿಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ ಬೆಳಗಾವಿ ನಗರದ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸೇವೆಗಳ ಕುರಿತು ಅಧಿಕಾರಿಗಳಿಗೆ ಪ್ರಮುಖ ನಿರ್ದೇಶನಗಳನ್ನು ನೀಡಲಾಯಿತು.

🔹ನಗರದ ಎಲ್ಲಾ ಸಾರ್ವಜನಿಕ ಶೌಚಾಲಯಗಳು ಸದಾ ಸಾರ್ವಜನಿಕರ ಬಳಕೆಗೆ ಮುಕ್ತವಾಗಿರಬೇಕು. ಸ್ವಚ್ಛತೆ, ನೈರ್ಮಲ್ಯ ಹಾಗೂ ಸಮರ್ಪಕ ನಿರ್ವಹಣೆಗೆ ಆದ್ಯತೆ ನೀಡಬೇಕು.

🔹 ಸರಕಾರಿ ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ಶೇ.60ರಷ್ಟು ಕನ್ನಡ ನಾಮಫಲಕ ಅಳವಡಿಸುವ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕ್ರಮ .

🔹 ನಗರಾಭಿವೃದ್ಧಿ ಕಾಮಗಾರಿಗಳು ಯಾವುದೇ ಕಾರಣಕ್ಕೂ ವಿಳಂಬವಾಗದಂತೆ ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಸೂಚನೆ.

🔹ನಗರದ ಹಳೆಯ ಘನತ್ಯಾಜ್ಯ (Legacy Waste)ವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವ ಮೂಲಕ ಸ್ವಚ್ಛ ಹಾಗೂ ಆರೋಗ್ಯಕರ ನಗರ ವಾತಾವರಣ ನಿರ್ಮಾಣ.

🔹 ಹಾಳಾಗಿರುವ ರಸ್ತೆಗಳನ್ನು ತ್ವರಿತವಾಗಿ ಗುರುತಿಸಿ, ಅಗತ್ಯ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ.

ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿ, ಸ್ವಚ್ಛತೆ ಹಾಗೂ ಜನರಿಗೆ ಉತ್ತಮ ಸಾರ್ವಜನಿಕ ಸೇವೆಗಳನ್ನು ಒದಗಿಸುವುದು ನಗರಾಭಿವೃದ್ಧಿ ಇಲಾಖೆಯ ಪ್ರಮುಖ ಆದ್ಯತೆಯಾಗಿದೆ.

ಸಭೆಯಲ್ಲಿ ಬೆಳಗಾವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಆಸೀಫ್ ರಾಜ ಶೇಟ್, ಬೆಳಗಾವಿ ನಗರಾಭಿವೃದ್ಧಿ ಅಧ್ಯಕ್ಷರಾದ (ಬೂಡಾ) ಶ್ರೀ ಲಕ್ಷ್ಮಣ ರಾವ್ ಜಿಂಗಳೆ,
ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ಪ್ರೀತಿ ಕಾವಕರ್,
ಉಪ ಮಹಾಪೌರರಾದ ಶ್ರೀ ಹಣಮಂತ ಕೊಂಗಾಲಿ ಬೆಳಗಾವಿ ಪಾಲಿಕೆ ಆಯುಕ್ತರಾದ ಶ್ರೀ ಕಾರ್ತಿಕ್, ಬೆಳಗಾವಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕರಾದ ಶ್ರೀಮತಿ ಕವಿತಾ ವಾರಂಗಲ್, ಬೆಳಗಾವಿ ನಗರಾಭಿವೃದ್ಧಿ ಆಯುಕ್ತರಾದ ಶ್ರೀ ಶಕೀಲ್ ಅಹ್ಮದ್ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

#ನಗರಾಭಿವೃದ್ಧಿಇಲಾಖೆ #ಬೆಳಗಾವಿ

ರಾಜ್ಯದ ಪ್ರತಿಯೊಂದು ನಗರಕ್ಕೂ ಶುದ್ಧ ಕುಡಿಯುವ ನೀರು ಹಾಗೂ ಸಮರ್ಪಕ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಗುರಿಯೊಂದಿಗೆ ಯೋಜನೆಗಳನ್ನು ಶೀಘ್ರಗತಿಯಲ್ಲಿ...
24/07/2026

ರಾಜ್ಯದ ಪ್ರತಿಯೊಂದು ನಗರಕ್ಕೂ ಶುದ್ಧ ಕುಡಿಯುವ ನೀರು ಹಾಗೂ ಸಮರ್ಪಕ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಗುರಿಯೊಂದಿಗೆ ಯೋಜನೆಗಳನ್ನು ಶೀಘ್ರಗತಿಯಲ್ಲಿ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ.

✔️ ಪ್ರಸ್ತುತ ಚಾಲ್ತಿಯಲ್ಲಿರುವ 18 ಯೋಜನೆಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವತ್ತ ಆದ್ಯತೆ
✔️ ಬಾಕಿ ಉಳಿದ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಲು ಸೂಚನೆ
✔️ ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಸಮಯಪಾಲನೆಗೆ ಒತ್ತು
✔️ ತ್ಯಾಜ್ಯ ನೀರು ಶುದ್ಧೀಕರಣ (STP) ಸಾಮರ್ಥ್ಯ ವೃದ್ಧಿಗೆ ಕ್ರಮ
✔️ AMRUT 2.0 ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಮಾರ್ಗಸೂಚಿ

ನಗರಗಳ ಸುಸ್ಥಿರ ಅಭಿವೃದ್ಧಿ ಮತ್ತು ಜನರಿಗೆ ಗುಣಮಟ್ಟದ ಮೂಲಸೌಕರ್ಯ ಒದಗಿಸುವುದು ನಮ್ಮ ಸರ್ಕಾರದ ಬದ್ಧತೆ.

ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (KUWSDB) ಕಚೇರಿಯಲ್ಲಿ ...
24/07/2026

ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (KUWSDB) ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ರಾಜ್ಯ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಿ, ಕುಡಿಯುವ ನೀರು ಹಾಗೂ ಒಳಚರಂಡಿ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಈ ಸಂದರ್ಭದಲ್ಲಿ ತಾಂತ್ರಿಕ ವರದಿಗಳನ್ನು ತ್ವರಿತವಾಗಿ ಸಿದ್ಧಪಡಿಸುವುದು, 2026-27ನೇ ಸಾಲಿನ ಗುರಿಯಾಗಿರುವ 18 ಪ್ರಮುಖ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವುದು, ರಾಜ್ಯಾದ್ಯಂತ ಶೋಧಿಸಿದ ತ್ಯಾಜ್ಯನೀರು ಸಂಸ್ಕರಣಾ ಘಟಕಗಳ (STP) ಅಗತ್ಯತೆಯ ಸಮಗ್ರ ಮ್ಯಾಪಿಂಗ್ ಕೈಗೊಳ್ಳುವುದು ಹಾಗೂ ಅಮೃತ್ 2.0 ಯೋಜನೆಗೆ ವಿಶೇಷ ಆದ್ಯತೆ ನೀಡುವಂತೆ ನಿರ್ದೇಶನ ನೀಡಲಾಯಿತು.

ಮೈಸೂರು, ಕಲಬುರಗಿ ಸೇರಿದಂತೆ ವಿವಿಧ ನಗರಗಳ ಕುಡಿಯುವ ನೀರು ಮತ್ತು ಒಳಚರಂಡಿ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿ, ನಗರ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ಮೂಲಕ ನಾಗರಿಕರಿಗೆ ಗುಣಮಟ್ಟದ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಒತ್ತು ನೀಡಲಾಯಿತು.


ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿಯಲ್ಲಿ ಸ್ವಚ್ಛ ಭಾರತ್ ಮಿಷನ್ 2.0 (SBM 2.0) ಯೋಜನೆಯ ಉನ್ನತ ಮಟ್ಟ...
22/07/2026

ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿಯಲ್ಲಿ ಸ್ವಚ್ಛ ಭಾರತ್ ಮಿಷನ್ 2.0 (SBM 2.0) ಯೋಜನೆಯ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ರಾಜ್ಯದ ನಗರ ಪ್ರದೇಶಗಳಲ್ಲಿ ತ್ಯಾಜ್ಯ ನಿರ್ವಹಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು.

ರಾಜ್ಯದ ಪ್ರತಿಯೊಂದು ನಗರದಲ್ಲೂ ಮೂಲದಲ್ಲೇ (Source Segregation) ಶೇಕಡಾ 100ರಷ್ಟು ಹಸಿ ಮತ್ತು ಒಣ ಕಸ ವಿಂಗಡಣೆ ಕಡ್ಡಾಯವಾಗಿ ಜಾರಿಯಾಗಬೇಕು. ದಾವಣಗೆರೆ ನಗರದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿರುವ ಈ ಮಾದರಿಯನ್ನು ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಅಳವಡಿಸಿಕೊಳ್ಳುವಂತೆ ಸೂಚನೆ ನೀಡಿದರು.

ಹಳೆಯ ಲೆಗಸಿ ವೇಸ್ಟ್ ಅನ್ನು ತ್ವರಿತವಾಗಿ ವಿಲೇವಾರಿ ಮಾಡುವುದರ ಜೊತೆಗೆ, ಹೊಸ ಕಸವು ವಿಂಗಡಣೆಯಾಗದೆ ಮತ್ತೆ ಕಸದ ರಾಶಿಯಾಗಿ ಮಾರ್ಪಡದಂತೆ ಅಗತ್ಯ ಸಂಸ್ಕರಣಾ ಸಾಮರ್ಥ್ಯವನ್ನು ಹೆಚ್ಚಿಸಬೇಕು. ನಗರಗಳಲ್ಲಿ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗೆ ಯಾವುದೇ ರಾಜಿ ಮಾಡಿಕೊಳ್ಳದೆ, ಬಾಕಿ ಉಳಿದಿರುವ ತ್ಯಾಜ್ಯ ಸಂಸ್ಕರಣಾ ಘಟಕಗಳು ಹಾಗೂ ನೈರ್ಮಲ್ಯ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜೊತೆಗೆ, ತ್ಯಾಜ್ಯದಿಂದ ವಿದ್ಯುತ್ (Waste-to-Energy) ಉತ್ಪಾದಿಸುವ ಯೋಜನೆಗಳನ್ನು ಮತ್ತಷ್ಟು ವಿಸ್ತರಿಸುವ ಸಾಧ್ಯತೆಗಳನ್ನು ಪರಿಶೀಲಿಸಿ, ತ್ಯಾಜ್ಯ ನಿರ್ವಹಣೆಗೆ ಶಾಶ್ವತ ಮತ್ತು ಪರಿಸರ ಸ್ನೇಹಿ ಪರಿಹಾರಗಳನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಇಂದು ನಗರಾಭಿವೃದ್ಧಿ ಸಚಿವರಾದ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ (KUIDFC) ಕಚೇರಿಯಲ...
21/07/2026

ಇಂದು ನಗರಾಭಿವೃದ್ಧಿ ಸಚಿವರಾದ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ (KUIDFC) ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು

ರಾಜ್ಯದ ವಿವಿಧ ನಗರಗಳಲ್ಲಿ ನಡೆಯುತ್ತಿರುವ ನಗರಾಭಿವೃದ್ಧಿ ಹಾಗೂ ಕುಡಿಯುವ ನೀರು ಸರಬರಾಜು ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿ, ಕಾಮಗಾರಿಗಳಲ್ಲಿ ಯಾವುದೇ ವಿಳಂಬವಾಗದಂತೆ ನಿರಂತರ ಮೇಲ್ವಿಚಾರಣೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು

ನಿಗದಿತ ಕಾಲಮಿತಿಯೊಳಗೆ ಎಲ್ಲ ಯೋಜನೆಗಳನ್ನು ಪೂರ್ಣಗೊಳಿಸಿ, ಜನರಿಗೆ ಗುಣಮಟ್ಟದ ಮೂಲಸೌಕರ್ಯ ಹಾಗೂ ಉತ್ತಮ ಸೇವೆಗಳನ್ನು ಒದಗಿಸಲು ಸಚಿವರು ನಿರ್ದೇಶಸಿದರು.

ಸಭೆಯಲ್ಲಿ ವಿಶ್ವ ಬ್ಯಾಂಕ್ ನೆರವಿನ ನಿರಂತರ ನೀರು ಸರಬರಾಜು ಯೋಜನೆ, ಜಲಶುದ್ಧಿ ಅಭಿಯಾನ, ಸ್ಮಾರ್ಟ್ ಸಿಟಿ ಮಿಷನ್ ಹಾಗೂ ಕರ್ನಾಟಕ ಸಮಗ್ರ ನಗರ ನೀರು ನಿರ್ವಹಣೆ ಹೂಡಿಕೆ ಕಾರ್ಯಕ್ರಮಗಳ ಪ್ರಗತಿ ಕುರಿತು ವಿಸ್ತೃತ ಚರ್ಚೆ ನಡೆಯಿತು.

ಸಭೆಯಲ್ಲಿ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಟಿ. ಭೂಬಾಲನ್, ಮುಖ್ಯ ಇಂಜಿನಿಯರ್‌ಗಳಾದ ಜೆ.ಆರ್. ನಂದೀಶ್, ಕೆ.ಪಿ.ಜಯರಾಮ್, ಅಧೀಕ್ಷಕ ಇಂಜಿನಿಯರ್ ಪದ್ಮನಾಭನ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ನಗರ ಭೂ ಸಾರಿಗೆ ನಿರ್ದೇಶನಾಲಯದ ವಿವಿಧ ಯೋಜನೆಗಳ ಪರಾಮರ್ಶೆ ನಡೆಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯಬೆಂಗಳೂರು, ಜುಲೈ 16: ನಗರಾಭಿವೃದ್ಧಿ ಸಚಿ...
16/07/2026

ನಗರ ಭೂ ಸಾರಿಗೆ ನಿರ್ದೇಶನಾಲಯದ ವಿವಿಧ ಯೋಜನೆಗಳ ಪರಾಮರ್ಶೆ ನಡೆಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು, ಜುಲೈ 16: ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ನಗರ ಭೂ ಸಾರಿಗೆ ನಿರ್ದೇಶನಾಲಯದ ವಿವಿಧ ಯೋಜನೆಗಳ ಕುರಿತು ನಡೆದ ಸಭೆಯಲ್ಲಿ ಯೋಜನೆಗಳ ಪರಾಮರ್ಶೆ ನಡೆಸಿದರು.

ಸಭೆಯಲ್ಲಿ ರಾಜ್ಯದ ನಗರಗಳಲ್ಲಿ ಸುಸ್ಥಿರ, ಸುರಕ್ಷಿತ ಹಾಗೂ ತಂತ್ರಜ್ಞಾನ ಆಧಾರಿತ ಸಾರ್ವಜನಿಕ ಭೂ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಯೋಜನೆಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲಾಯಿತು. ನಗರಗಳಲ್ಲಿ ನೂತನ ಸಾರ್ವಜನಿಕ ಭೂ ಸಾರಿಗೆ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳಲು ಸಿದ್ಧಪಡಿಸಲಾಗುತ್ತಿರುವ ಕಾರ್ಯಸಾಧ್ಯತಾ ವರದಿ, ಅಗತ್ಯವಿರುವ ಕಡೆಗಳಲ್ಲಿ ಹೊಸ ಬಸ್ ನಿಲ್ದಾಣಗಳ ನಿರ್ಮಾಣ, AI ಸಂಚಾರ ನಿರ್ವಹಣಾ ವ್ಯವಸ್ಥೆ (ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್) ಜಾರಿಗೊಳಿಸುವಿಕೆ ಹಾಗೂ ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ನಗರಗಳಲ್ಲಿ ಇವಿ ಚಾರ್ಜಿಂಗ್ ಕೇಂದ್ರಗಳ ವಿಸ್ತರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸವಿಸ್ತಾರವಾಗಿ ಚರ್ಚಿಸಲಾಯಿತು.

ನಗರಗಳ ಬೆಳವಣಿಗೆ ಮತ್ತು ಸಾರ್ವಜನಿಕರ ಹೆಚ್ಚುತ್ತಿರುವ ಸಾರಿಗೆ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಭವಿಷ್ಯದ ಅಗತ್ಯಗಳಿಗೆ ಅನುಗುಣವಾಗಿ ಯೋಜನೆಗಳನ್ನು ರೂಪಿಸಬೇಕು. ಯೋಜನೆಗಳ ಅನುಷ್ಠಾನದಲ್ಲಿ ಗುಣಮಟ್ಟ, ಪಾರದರ್ಶಕತೆ ಹಾಗೂ ಕಾಲಮಿತಿಗೆ ಆದ್ಯತೆ ನೀಡಿ, ಸಾರ್ವಜನಿಕರಿಗೆ ವಿಶ್ವಾಸಾರ್ಹ, ಸುಗಮ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಬಿ.ಬಿ. ಕಾವೇರಿ, ನಗರ ಭೂ ಸಾರಿಗೆ ಇಲಾಖೆಯ ಆಯುಕ್ತರಾದ ಮಣಿವಣ್ಣನ್ ಹಾಗೂ ನಗರ ಭೂ ಸಾರಿಗೆ ನಿರ್ದೇಶನಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇಂದು ಕಲಬುರಗಿ ನಗರದಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಹಾಗೂ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯನ್ನು ಮಾನ್ಯ ನಗರಾಭಿವೃ...
13/07/2026

ಇಂದು ಕಲಬುರಗಿ ನಗರದಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಹಾಗೂ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯನ್ನು ಮಾನ್ಯ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಸಭೆಯಲ್ಲಿ ಕುಡಿಯುವ ನೀರಿನ ಪೂರೈಕೆ, ರಸ್ತೆ ಅಭಿವೃದ್ಧಿ, ಒಳಚರಂಡಿ ವ್ಯವಸ್ಥೆ, ಘನ ತ್ಯಾಜ್ಯ ನಿರ್ವಹಣೆ, ಬೀದಿ ದೀಪಗಳು, ಉದ್ಯಾನವನಗಳ ಅಭಿವೃದ್ಧಿ, ವಸತಿ ಯೋಜನೆಗಳು ಸೇರಿದಂತೆ ವಿವಿಧ ನಗರಾಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಇಲಾಖಾವಾರು ಪರಿಶೀಲಿಸಲಾಯಿತು.

ನಗರದ ನಾಗರಿಕರಿಗೆ ಗುಣಮಟ್ಟದ ಮೂಲಸೌಕರ್ಯ ಮತ್ತು ಅಗತ್ಯ ನಾಗರಿಕ ಸೌಲಭ್ಯಗಳನ್ನು ಸಮಯಕ್ಕೆ ಸರಿಯಾಗಿ ಒದಗಿಸುವ ನಿಟ್ಟಿನಲ್ಲಿ, ಬಾಕಿ ಉಳಿದಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಹಾಗೂ ಕಾಮಗಾರಿಗಳ ಗುಣಮಟ್ಟ ಮತ್ತು ಪಾರದರ್ಶಕತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಸಾರ್ವಜನಿಕರ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸಿ, ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡುವ ಮೂಲಕ ಜನಸ್ನೇಹಿ ಆಡಳಿತವನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

#ನಗರಾಭಿವೃದ್ಧಿ #ಕಲಬುರಗಿ

ಮೈಸೂರಿನ ನಂಜನಗೂಡು ಮುಖ್ಯರಸ್ತೆಯ APMC ಸಿಗ್ನಲ್ ಹಾಗೂ ಆಯರಹಳ್ಳಿ ಜಂಕ್ಷನ್ ನಲ್ಲಿ  ಪ್ರಗತಿಯಲ್ಲಿರುವ ಮೇಲುಸೇತುವೆ ನಿರ್ಮಾಣ ಕಾಮಗಾರಿಯನ್ನು ಇಂ...
07/07/2026

ಮೈಸೂರಿನ ನಂಜನಗೂಡು ಮುಖ್ಯರಸ್ತೆಯ APMC ಸಿಗ್ನಲ್ ಹಾಗೂ ಆಯರಹಳ್ಳಿ ಜಂಕ್ಷನ್ ನಲ್ಲಿ ಪ್ರಗತಿಯಲ್ಲಿರುವ ಮೇಲುಸೇತುವೆ ನಿರ್ಮಾಣ ಕಾಮಗಾರಿಯನ್ನು ಇಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಕಾಮಗಾರಿಯ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಪರಿಶೀಲನೆ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಲಕ್ಷ್ಮೀಕಾಂತ್ ರೆಡ್ಡಿ ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Address

Ambedkar Veedhi
Davangere
577002

Alerts

Be the first to know and let us send you an email when Urban Development Department - Karnataka posts news and promotions. Your email address will not be used for any other purpose, and you can unsubscribe at any time.

Contact The School

Send a message to Urban Development Department - Karnataka:

Shortcuts

Share