20/08/2022
ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ, ಧಾರವಾಡದಲ್ಲಿ ದಿ:19.08.2022 ರಂದು ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಅತ್ಯಂತ ವಿಜ್ರಂಬಣೆಯಿಂದ ಆಚರಿಸಲಾಯಿತು. ಇವತ್ತಿನ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕರಾದ ಶ್ರೀ ಶಿವರಾಜ ಭಟ್ಟ ಗುರೂಜಿ ಶ್ರೀ ಕೃಷ್ಣನ ಅವತಾರದ ಬಗ್ಗೆ ತಿಳಿಸಿಕಕೊಟ್ಟರು. ಶ್ರೀ ಹರ್ಷಾ ಭಟ್ಟ ಹಾಗೂ ಶ್ರೀ ರಾಮಚಂದ್ರ ಭಟ್ಟ ಇವರು ಪೂಜಾ ಕಾರ್ಯವನ್ನು ನಡೆಸಿಕೊಟ್ಟರು.
ವಿದ್ಯಾರ್ಥಿಗಳಿಂದ ಸಾಮೂಹಿಕ ನೃತ್ಯ, ಸಾಮೂಹಿಕ ಭಕ್ತಿಗೀತೆ ಗಾಯನ, ಭಜನೆ, ಗುರುಮಾತೆಯರಿಂದ ನೃತ್ಯ, ಮೊಸರು ಗಡಿಗೆ ಒಡೆಯುವ ಕಾರ್ಯಕ್ರಮ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿಗಳಾದ ಶ್ರೀ ರಾಘವೇಂದ್ರ ಅಂಬೇಕರ್, ಪ್ರಾಂಶುಪಾಲರಾದ ಶ್ರೀಮತಿ ಡಾ. ಅನಿತಾ ರೈ, ಆಡಳಿತಾಧಿಕಾರಿಗಳಾದ ಶ್ರೀ ಕುಮಾರಸ್ವಾಮಿ ಕುಲಕರ್ಣಿ ಹಾಗೂ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕು.ಬಸವರಾಜ ಕೊಡಳ್ಳಿ ನಿರೂಪಿಸಿದರು.