Cauvery PU College Gonikoppal

Cauvery PU College Gonikoppal A Pre-University Education Institution based in Gonikoppal, Coorg

Cauvery college located in the hilly region is an open window for the seekers of Higher Education. It belives in self-relization and self-reliance and has an objective to serve all those who come under its fold, giving them a good education,teaching them skills and providing its learners a plethora of programmes to discover themselves.

District level invitational handball tournament organized by Fathima pu college Kushalnagar winners cauvery pu college g...
10/08/2026

District level invitational handball tournament organized by Fathima pu college Kushalnagar winners cauvery pu college gonikoppal

“ಭಾರತೀಯ ಸೇನೆಯಲ್ಲಿ ಅವಕಾಶಗಳು” ಕುರಿತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮಕಾವೇರಿ ಪಿಯು ಕಾಲೇಜು, ಗೋಣಿಕೊಪ್ಪಲಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ...
10/08/2026

“ಭಾರತೀಯ ಸೇನೆಯಲ್ಲಿ ಅವಕಾಶಗಳು” ಕುರಿತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಕಾವೇರಿ ಪಿಯು ಕಾಲೇಜು, ಗೋಣಿಕೊಪ್ಪಲಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ “ಭಾರತೀಯ ಸೇನೆಯಲ್ಲಿ ಅವಕಾಶಗಳು” ಎಂಬ ವಿಷಯದ ಕುರಿತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಆಫೀಸರ್ ಚೊಟೇಕಳಪಂಡ ಕ್ಷಮಾ ಪೂಣಚ್ಚ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

ಕಾರ್ಯಕ್ರಮವು ಶ್ರೀಮತಿ ಜೆಸಿಂತಾ ಅವರ ಸ್ವಾಗತ ಭಾಷಣ ಮತ್ತು ಪರಿಚಯದೊಂದಿಗೆ ಆರಂಭವಾಯಿತು. ಫ್ಲೈಯಿಂಗ್ ಆಫೀಸರ್ ಕ್ಷಮಾ ಪೂಣಚ್ಚ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಎನ್‌ಡಿಎ ಪರೀಕ್ಷೆ ಹಾಗೂ ಭಾರತೀಯ ಸೇನೆಯಲ್ಲಿನ ವೃತ್ತಿ ಅವಕಾಶಗಳ ಕುರಿತು ಅಮೂಲ್ಯ ಮಾಹಿತಿಯನ್ನು ಹಂಚಿಕೊಂಡರು.

ವಿದ್ಯಾರ್ಥಿಗಳು ಎನ್‌ಡಿಎ ಪರೀಕ್ಷೆಗೆ ಹೇಗೆ ಸಿದ್ಧತೆ ಮಾಡಿಕೊಳ್ಳಬೇಕು, ದೈಹಿಕ ಸಾಮರ್ಥ್ಯ ಮತ್ತು ನಿಯಮಿತ ದೈಹಿಕ ಚಟುವಟಿಕೆಯ ಮಹತ್ವ, ಯಾವ ಪುಸ್ತಕಗಳು ಮತ್ತು ಅಧ್ಯಯನ ಸಾಮಗ್ರಿಗಳನ್ನು ಬಳಸಬೇಕು ಹಾಗೂ ಪರೀಕ್ಷೆಗೆ ಹಾಜರಾಗಲು ಅಗತ್ಯವಿರುವ ಕನಿಷ್ಠ ಮತ್ತು ಗರಿಷ್ಠ ವಯೋಮಿತಿಯ ಕುರಿತು ಅವರು ವಿವರವಾಗಿ ತಿಳಿಸಿದರು. ತಮ್ಮ ವೈಯಕ್ತಿಕ ಅನುಭವಗಳನ್ನು ಹಂಚಿಕೊಂಡ ಅವರು, ಎನ್‌ಡಿಎ ಅಕಾಡೆಮಿಯಲ್ಲಿನ ಜೀವನಶೈಲಿ ಮತ್ತು ತರಬೇತಿಯ ಕುರಿತು ವಿದ್ಯಾರ್ಥಿಗಳಿಗೆ ಒಳನೋಟ ನೀಡಿದರು. ಭಾರತೀಯ ಸೇನೆಯಲ್ಲಿ ಬಳಸಲಾಗುವ ವಿವಿಧ ಶಸ್ತ್ರಾಸ್ತ್ರಗಳ ಬಗ್ಗೆಯೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಈ ಸಂವಾದವು ಅತ್ಯಂತ ಸಂವಾದಾತ್ಮಕವಾಗಿದ್ದು, ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ಎನ್‌ಡಿಎ ಪರೀಕ್ಷೆ, ತರಬೇತಿ, ದೈಹಿಕ ಸಾಮರ್ಥ್ಯ ಹಾಗೂ ಸಶಸ್ತ್ರ ಪಡೆಗಳಲ್ಲಿನ ಜೀವನದ ಕುರಿತು ಹಲವಾರು ಪ್ರಶ್ನೆಗಳನ್ನು ಕೇಳಿದರು. ಸಂಪನ್ಮೂಲ ವ್ಯಕ್ತಿಯವರು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಪ್ರಾಯೋಗಿಕ ಮಾರ್ಗದರ್ಶನ ಮತ್ತು ಪ್ರೋತ್ಸಾಹದೊಂದಿಗೆ ಉತ್ತರಿಸಿದರು.

ಫ್ಲೈಯಿಂಗ್ ಆಫೀಸರ್ ಕ್ಷಮಾ ಪೂಣಚ್ಚ ಅವರ ತಂದೆ ಹಾಗೂ ತಪಸ್ಯಾ ಅಕಾಡೆಮಿಯ ಸಂಸ್ಥಾಪಕರಾದ ಶ್ರೀ ಪೃಥ್ವಿ ಪೂಣಚ್ಚ ಅವರು ಸಹ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಎನ್‌ಡಿಎ ಪರೀಕ್ಷೆಗೆ ಪರಿಣಾಮಕಾರಿಯಾಗಿ ಸಿದ್ಧತೆ ಮಾಡಿಕೊಳ್ಳುವ ಕುರಿತು ಉಪಯುಕ್ತ ಸಲಹೆ ಮತ್ತು ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಕ್ಯಾಪ್ಟನ್ ಬ್ರೈಟಾ ಕುಮಾರ್, ವಿದ್ಯಾರ್ಥಿಕ್ಷೇಮ ಅಭಿವೃದ್ಧಿ ಸಂಫ‌ದ ಸಂಚಾಲಕರಾದ ಶ್ರೀಮತಿ ವಿಪ್ರಾ ನೀಲಮ್ಮ, ಚೇತನ್ ಚಿನ್ನಪ್ಪ, ಪೂವಮ್ಮ ಎಂ.ಬಿ., ಬೋಧಕ ವರ್ಗದವರು ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ಯಶೋಧ ಅವರು ನಡೆಸಿದರು. ಶ್ರೀಮತಿ ಕರಿಷ್ಮಾ ಸುಧೀರ್ ಅವರು ವಂದನಾರ್ಪಣೆ ಸಲ್ಲಿಸಿದರು.

ಈ ಕಾರ್ಯಕ್ರಮವು ಅತ್ಯಂತ ಮಾಹಿತಿಪೂರ್ಣ ಹಾಗೂ ಪ್ರೇರಣಾದಾಯಕವಾಗಿದ್ದು, ವಿದ್ಯಾರ್ಥಿಗಳಿಗೆ ಭಾರತೀಯ ಸಶಸ್ತ್ರ ಪಡೆಗಳಲ್ಲಿನ ವೃತ್ತಿ ಅವಕಾಶಗಳನ್ನು ಅನ್ವೇಷಿಸಲು ಪ್ರೇರಣೆ ನೀಡಿತು. ಶಿಸ್ತು, ಸಮರ್ಪಣೆ ಮತ್ತು ದೈಹಿಕ ಸಾಮರ್ಥ್ಯದೊಂದಿಗೆ ತಮ್ಮ ಗುರಿಗಳತ್ತ ಮುನ್ನಡೆಯಲು ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಿತು.

ಸ್ವಾಸ್ತ್ಯ ಸಂಕಲ್ಪ‌ ಕಾರ್ಯಕ್ರಮ!!!
10/08/2026

ಸ್ವಾಸ್ತ್ಯ ಸಂಕಲ್ಪ‌ ಕಾರ್ಯಕ್ರಮ!!!

*ಯಶಸ್ವಿಯಾಗಿ ನಡೆದ ಗೋಣಿಕೊಪ್ಪಲು ಕಾವೇರಿ  ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭ*-----------------...
31/07/2026

*ಯಶಸ್ವಿಯಾಗಿ ನಡೆದ ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭ*
---------------------------------
ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭ ಚೆಕ್ಕೆರ ಮುತ್ತಣ್ಣ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಿಟ್ಟಂಗಾಲದ ಕ್ರೇಡೋ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಫಿಜಿಶಿಯನ್ ಡಾ. ಅಪೂರ್ವ ಪ್ರಸನ್ನ ಎಂ ಅವರು ದೀಪಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಚಾಟ್‌ ಜಿಪಿಟಿ ಹಾಗೂ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಮಾನಸಿಕ ಆರೋಗ್ಯ, ಏಕಾಗ್ರತೆ, ಸಮಸ್ಯೆ ಪರಿಹರಿಸುವ ಸಾಮರ್ಥ್ಯ ಮತ್ತು ವೈಯಕ್ತಿಕ ಗೌಪ್ಯತೆಯ ಮೇಲೆ ಪ್ರತಿಕೂಲ ಪರಿಣಾಮಗಳು ಉಂಟು ಮಾಡುವ ಸಾಧ್ಯತೆ ಇದೇ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ತಂತ್ರಜ್ಞಾನವನ್ನು ಅಗತ್ಯವಿರುವ ಮಟ್ಟಿಗೆ ಮಾತ್ರ ಬಳಸಬೇಕು. ಯಾವುದೇ ಕೃತಕ ಬುದ್ಧಿಮತ್ತೆ (AI) ಸಾಧನವನ್ನು ಸಂಪೂರ್ಣವಾಗಿ ಅವಲಂಬಿಸುವ ಬದಲು, ಸ್ವತಂತ್ರ ಚಿಂತನೆ ಮತ್ತು ಸಮಸ್ಯೆ ಪರಿಹರಿಸುವ ಕೌಶಲ್ಯವನ್ನು ಬೆಳೆಸಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು.
ಸಾಮಾಜಿಕ ಜಾಲತಾಣಗಳು ಹಾಗೂ ಎಐ ಆಧಾರಿತ ಸೇವೆಗಳನ್ನು ಬಳಸುವಾಗ ವೈಯಕ್ತಿಕ ಮತ್ತು ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಳ್ಳುವುದನ್ನು ತಪ್ಪಿಸಬೇಕು. ಮಾನಸಿಕ ಒತ್ತಡ ಅಥವಾ ವೈಯಕ್ತಿಕ ಸಮಸ್ಯೆಗಳಿದ್ದರೆ ಯಂತ್ರಗಳಿಗಿಂತ ಕುಟುಂಬದವರು, ಶಿಕ್ಷಕರು, ಸ್ನೇಹಿತರು ಅಥವಾ ವೈದ್ಯರೊಂದಿಗೆ ಚರ್ಚಿಸುವುದು ಸೂಕ್ತ ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ಮತ್ತು ಯುವಜನರು ದಿನನಿತ್ಯ ಪುಸ್ತಕ ಓದುವ ಅಭ್ಯಾಸ, ಕ್ರೀಡೆ ಹಾಗೂ ದೈಹಿಕ ಚಟುವಟಿಕೆಗಳಿಗೆ ಹೆಚ್ಚಿನ ಸಮಯ ಮೀಸಲಿಡಬೇಕು. ಮೊಬೈಲ್ ಫೋನ್ ಮತ್ತು ಸಾಮಾಜಿಕ ಜಾಲತಾಣಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವುದು ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸಹಕಾರಿ ಎಂದು ಹೇಳಿದರು.
ಅಲ್ಲದೆ, ಧೂಮಪಾನ, ಮದ್ಯಪಾನ ಹಾಗೂ ಇತರ ವ್ಯಸನಗಳಿಂದ ದೂರವಿರುವಂತೆ ಕರೆ ನೀಡಿದ ಅವರು, ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವುದರಿಂದ ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಬಹುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷರಾದ ಮಂಡೆಪಂಡ ಸುಗುಣ ಮುತ್ತಣ್ಣ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿದ್ದರೂ ಕಾವೇರಿ ಕಾಲೇಜು ಉತ್ತಮ ಶೈಕ್ಷಣಿಕ ವಾತಾವರಣ, ಶಿಸ್ತು ಮತ್ತು ಗುಣಮಟ್ಟದ ಶಿಕ್ಷಣದ ಮೂಲಕ ಉತ್ತಮ ಹೆಸರು ಗಳಿಸಿರುವ ಶಿಕ್ಷಣ ಸಂಸ್ಥೆಯಾಗಿದೆ. ಇಲ್ಲಿ ವಿದ್ಯಾಭ್ಯಾಸ ಮಾಡಿದ ಬಹುತೇಕ ವಿದ್ಯಾರ್ಥಿಗಳು ಉತ್ತಮ ಬದುಕುಕಟ್ಟಿಕೊಂಡಿದ್ದಾರೆ.
ವಿದ್ಯಾರ್ಥಿಗಳು ಶಿಸ್ತುಬದ್ಧ ಜೀವನವನ್ನು ರೂಢಿಸಿಕೊಳ್ಳಬೇಕು. ಸ್ವಚ್ಛ ಹಾಗೂ ಅಚ್ಚುಕಟ್ಟಾದ ಸಮವಸ್ತ್ರ ಧರಿಸಿ ಕಾಲೇಜಿಗೆ ಆಗಮಿಸಬೇಕು. ಉಡುಗೆ, ನಡವಳಿಕೆ ಮತ್ತು ವ್ಯಕ್ತಿತ್ವದಲ್ಲಿ ಸೌಜನ್ಯವನ್ನು ಬೆಳೆಸಿಕೊಳ್ಳುವುದು ಯಶಸ್ಸಿನ ಪ್ರಮುಖ ಅಂಶವಾಗಿದೆ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಶೇ. 100 ರಷ್ಟು ಅಂಕಗಳಿಸಿದ ಫರ್ಹಾನ, ಬಿಸಿನೆಸ್ ಸ್ಟಡೀಸ್ ವಿಷಯದಲ್ಲಿ ಶೇ. 100ರಷ್ಟು ಅಂಕ ಪಡೆದ ಗಾನವಿ, ಕನ್ನಡ ಮಾಧ್ಯಮ ವಿದ್ಯಾರ್ಥಿಯಾಗಿ, ವಿಜ್ಞಾನ ವಿಭಾಗದಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ಪೂಜಾ ಹಾಗೂ ವೈದ್ಯಕೀಯ ಸೇವೆಗಾಗಿ ಡಾ. ಅಪೂರ್ವ ಪ್ರಸನ್ನ ಎಂ ಅವರನ್ನು ಸನ್ಮಾನಿಸಲಾಯಿತು.
ಪ್ರಾಂಶುಪಾಲರಾದ ಪ್ರೊ. ಎಸ್. ಎಸ್. ಮಾದಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕರಾದ ವಿಪ್ರ ನೀಲಮ್ಮ ವೇದಿಕೆಯಲ್ಲಿದ್ದರು. ಕಾವೇರಿ ಎಜುಕೇಷನ್ ಸೊಸೈಟಿ ನಿರ್ದೇಶಕರಾದ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ, ಕಾವೇರಿ ಪದವಿ ಕಾಲೇಜು ಪ್ರಾಂಶುಪಾಲರಾದ ಡಾ. ಎಂ. ಬಿ. ಕಾವೇರಿಯಪ್ಪ, ಉಪನ್ಯಾಸಕರು ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ವಿದ್ಯಾರ್ಥಿಗಳು ಇದ್ದರು.
ವಿದ್ಯಾರ್ಥಿಗಳಿಂದ ವಿವಿಧ ಸಂಸ್ಕಾತಿಕ ಕಾರ್ಯಕ್ರಮಗಳು ನಡೆದವು.

*ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ.*ಪೊನ್ನಂಪೇಟೆ.ಜು.26: ಆಪರೇಷನ್ ವಿಜಯ್ ಯಶಸ್ಸಿನ ಸ್ಮರಣಾರ್ಥ ಗೋಣಿಕೊಪ್ಪಲು ...
26/07/2026

*ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ.*

ಪೊನ್ನಂಪೇಟೆ.ಜು.26: ಆಪರೇಷನ್ ವಿಜಯ್ ಯಶಸ್ಸಿನ ಸ್ಮರಣಾರ್ಥ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಆವರಣದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಅವರ ಜೋಡಿ ಪ್ರತಿಮೆಗಳಿಗೆ ಪುಷ್ಪ ನಮನ ಸಲ್ಲಿಸಿ ನಂತರ ಕಾರ್ಗಿಲ್ ಯುದ್ಧದಲ್ಲಿ ಮಡಿದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಕಾವೇರಿ ಕಾಲೇಜು ಎನ್ ಸಿ ಸಿ ಘಟಕದ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಆಚರಣೆ ಮಾಡಲಾಯಿತು.
ಕಾವೇರಿ ಕಾಲೇಜು ಪ್ರಾಂಶುಪಾಲರಾದ ಡಾ. ಎಂ. ಬಿ. ಕಾವೇರಿಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾವೇರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಪ್ರೊ. ಎಸ್. ಎಸ್. ಮಾದಯ್ಯ, ಹಿರಿಯ ವೈದ್ಯರಾದ ಕಾಳಿಮಾಡ ಶಿವಪ್ಪ, ಗ್ರಂಥಾಪಾಲಕರಾದ ಡಾ. ಸಂತೋಷ್ ಚೌಹಾಣ್, ಎನ್ ಸಿ ಸಿ ಅಧಿಕಾರಿಗಳಾದ ಡಾ. ಲೆಫ್ಟಿನೆಂಟ್ ಎಂ.ಆರ್.ಆಕ್ರಂ, ಲೆಫ್ಟಿನೆಂಟ್ ಐ. ಡಿ. ಲೇಪಾಕ್ಷಿ, ಹಾಗೂ ಎನ್ ಸಿ ಸಿ ಕೆಡೆಟ್ ಗಳು ಹಾಜರಿದ್ದರು.

ವಿರಾಜಪೇಟೆ–ಪೊನ್ನಂಪೇಟೆ ತಾಲೂಕು ಮಟ್ಟದ ಕ್ರೀಡಾಕೂಟಗಳ ಆಯೋಜನೆ ಕುರಿತು ಪೂರ್ವಭಾವಿ ಸಭೆಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ...
25/07/2026

ವಿರಾಜಪೇಟೆ–ಪೊನ್ನಂಪೇಟೆ ತಾಲೂಕು ಮಟ್ಟದ ಕ್ರೀಡಾಕೂಟಗಳ ಆಯೋಜನೆ ಕುರಿತು ಪೂರ್ವಭಾವಿ ಸಭೆ

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಕಾವೇರಿ ಪದವಿಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕು ಮಟ್ಟದ ವಿವಿಧ ಕ್ರೀಡಾ ಚಟುವಟಿಕೆಗಳ ಯಶಸ್ವಿ ಆಯೋಜನೆಗೆ ಸಂಬಂಧಿಸಿದ ಪೂರ್ವಭಾವಿ ಸಭೆ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಗಣಪತಿ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕ್ರೀಡೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಆದ್ದರಿಂದ ಪದವಿಪೂರ್ವ ಹಂತದಿಂದಲೇ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು ಎಂದು ಕರೆ ನೀಡಿದರು. ಕ್ರೀಡೆಯು ದೈಹಿಕ ಸಾಮರ್ಥ್ಯದ ಜೊತೆಗೆ ಶಿಸ್ತು, ನಾಯಕತ್ವ, ಆತ್ಮವಿಶ್ವಾಸ ಮತ್ತು ತಂಡದ ಮನೋಭಾವವನ್ನು ಬೆಳೆಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಎಸ್. ಎಸ್. ಮಾದಯ್ಯ ವಹಿಸಿ, ತಾಲೂಕು ಮಟ್ಟದ ಕ್ರೀಡಾಕೂಟಗಳನ್ನು ಯಶಸ್ವಿಯಾಗಿ ಆಯೋಜಿಸಲು ಎಲ್ಲ ಶಿಕ್ಷಣ ಸಂಸ್ಥೆಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

ಸಭೆಯಲ್ಲಿ ಕೊಡಗು ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಹಂಡ್ರಂಗಿ ನಾಗರಾಜ್, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಚಂದ್ರಶೇಖರ್, ಪೊನ್ನಂಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾಗೇಶ್, ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಹರೀಶ್ ತಾಮನ್ಕರ್, ಪಾಲಿಬೆಟ್ಟ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಶೈನಾ, ಲಯನ್ಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಲತಾ ಸೇರಿದಂತೆ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ಎಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ದೈಹಿಕ ಶಿಕ್ಷಣ ಉಪನ್ಯಾಸಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಗಣಪತಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಜಶ್ಮಿ ಅವರು ಸ್ವಾಗತಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕರಾದ ಸಂತೋಷ್ ವಂದಿಸಿದರು. ಉಪನ್ಯಾಸಕಿ ಶ್ರೀಮತಿ ಕುಸುಮ್ ನಿರೂಪಿಸಿದರು.

12/07/2026
ಪೋಷಕ-ಶಿಕ್ಷಕ ಸಹಭಾಗಿತ್ವದಿಂದ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಒತ್ತುಗೋಣಿಕೊಪ್ಪಲು, ಜುಲೈ 6: ಕಾವೇರಿ ಪದವಿಪೂರ್ವ ಕಾಲೇಜಿನ ವಿಜ್ಞಾನ ...
06/07/2026

ಪೋಷಕ-ಶಿಕ್ಷಕ ಸಹಭಾಗಿತ್ವದಿಂದ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು

ಗೋಣಿಕೊಪ್ಪಲು, ಜುಲೈ 6: ಕಾವೇರಿ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ ಪೋಷಕ-ಶಿಕ್ಷಕ ಸಂಘದ ಸಭೆಯನ್ನು ಕಾಲೇಜಿನ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಯೋಜಿಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಶಿಸ್ತು, ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಹಾಗೂ ಪೋಷಕರ ಸಹಭಾಗಿತ್ವದ ಮಹತ್ವದ ಕುರಿತು ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಎಸ್. ಎಸ್. ಮಾದಯ್ಯ, ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಪೋಷಕರು ಮತ್ತು ಶಿಕ್ಷಕರ ಪರಸ್ಪರ ಸಹಕಾರ ಅತ್ಯಂತ ಅವಶ್ಯಕವಾಗಿದೆ. ವಿದ್ಯಾರ್ಥಿಗಳ ಕಲಿಕೆ, ವ್ಯಕ್ತಿತ್ವ ವಿಕಾಸ ಹಾಗೂ ಮೌಲ್ಯಾಧಾರಿತ ಶಿಕ್ಷಣಕ್ಕೆ ಪೋಷಕ-ಶಿಕ್ಷಕ ಸಂಘವು ಪ್ರಮುಖ ವೇದಿಕೆಯಾಗಿದ್ದು, ಪೋಷಕರು ಮಕ್ಕಳ ಶೈಕ್ಷಣಿಕ ಬೆಳವಣಿಗೆಯ ಕುರಿತು ನಿರಂತರವಾಗಿ ಗಮನಹರಿಸಬೇಕು ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬ್ರಾಹ್ಮಿ ವಿದ್ವತ್ ಅಕಾಡೆಮಿ, ಬೆಂಗಳೂರು ಸಂಸ್ಥೆಯ ಸಿ.ಇ.ಟಿ. ಹಾಗೂ ನೀಟ್ ತರಬೇತಿ ವಿಭಾಗದ ಸಂಚಾಲಕರಾದ ಅರುಣ್ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಿ.ಇ.ಟಿ. ಮತ್ತು ನೀಟ್ ಪರೀಕ್ಷೆಗಳ ಮಹತ್ವ, ಅಧ್ಯಯನದ ವೈಜ್ಞಾನಿಕ ವಿಧಾನಗಳು, ಸಮಯದ ಸಮರ್ಪಕ ನಿರ್ವಹಣೆ ಹಾಗೂ ಯಶಸ್ಸು ಸಾಧಿಸಲು ಅನುಸರಿಸಬೇಕಾದ ತಂತ್ರಗಳ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಉಪನಿರ್ದೇಶಕರಾದ ತಾತಂಡ ಜ್ಯೋತಿಪ್ರಕಾಶ್ ಅವರು ಮಾತನಾಡಿ, ವಿದ್ಯಾರ್ಥಿಗಳ ಉತ್ತಮ ಪಲಿತಾಂಶ, ಶಿಸ್ತು, ನೈತಿಕ ಮೌಲ್ಯಗಳು ಹಾಗೂ ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಪೋಷಕರು ಮತ್ತು ಶಿಕ್ಷಕರು ಸಮಾನ ಹೊಣೆಗಾರಿಕೆಯನ್ನು ಹೊಂದಿದ್ದಾರೆ. ಮಕ್ಕಳೊಂದಿಗೆ ನಿರಂತರ ಸಂವಾದ, ಪ್ರೋತ್ಸಾಹ ಮತ್ತು ಸೂಕ್ತ ಮಾರ್ಗದರ್ಶನ ನೀಡಿದರೆ ಅವರು ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಸಭೆಯಲ್ಲಿ ಹಿರಿಯ ಉಪನ್ಯಾಸಕರಾದ ಶ್ರೀಮತಿ ಜೆಸಿಂತಾ, ಅಮ್ಮಣಿಚ್ಚಂಡ ಚೇತನ್ ಚಿಣ್ಣಪ್ಪ, ಜಶ್ಮೀ, ಕರೀಷ್ಮಾ ಹಾಗೂ ಯಶೋದ ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಮತ್ತು ವಿಭಾಗದ ವಿವಿಧ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಪೋಷಕ-ಶಿಕ್ಷಕ ಸಂಘದ ಸಂಚಾಲಕರಾದ ಲೆಫ್ಟಿನೆಂಟ್ ಅಕ್ರಂ ಸ್ವಾಗತಿಸಿ, ಸಭೆಯ ಉದ್ದೇಶವನ್ನು ವಿವರಿಸಿದರು. ಉಪನ್ಯಾಸಕಿ ಜಶ್ಮೀ ವಂದಿಸಿದರು.

Election Awareness program on SIR (special Intensive Revision) was held  on 3rd July 2026.
06/07/2026

Election Awareness program on SIR (special Intensive Revision) was held on 3rd July 2026.

Address

Cauvery Pre-University College Gonikoppal
Gonikoppal
571213

Alerts

Be the first to know and let us send you an email when Cauvery PU College Gonikoppal posts news and promotions. Your email address will not be used for any other purpose, and you can unsubscribe at any time.

Contact The School

Send a message to Cauvery PU College Gonikoppal:

Shortcuts

Share

Category