06/07/2021
ದ.ಕ.ಜಿ.ಪಂ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಡ್ಯಾರು ( ಬನ್ನಡ್ಕ)
ಮೂಡುಬಿದಿರೆ ವಲಯ, ಬೆಳುವಾಯಿ ಕ್ಲಸ್ಟರ್.
ನಮ್ಮ ಶಾಲೆಯಲ್ಲಿ ಆರ್ಥಿಕವಾಗಿ ತುಂಬಾ ಹಿಂದುಳಿದ 14 ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ. ಕೊರೋನಾ ವಿಷಮ ಪರಿಸ್ಥಿತಿಯ ಈ ಸಂದರ್ಭದಲ್ಲಿ ಬೋಳ ವಿಶ್ವನಾಥ್ ಕಾಮತ್ ರವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ಗ್ರಾಮಾಂತರ ಜಿಲ್ಲೆಯ ಸ್ವ ಉದ್ಯೋಗಿ ಕಾರ್ಯ ಪ್ರಮುಖ ಮಂಜುನಾಥ ಶೆಟ್ಟಿ ಹಾಗೂ ತಾಲೂಕು ಕಾರ್ಯ ನಿರ್ವಾಹಕ ಸುಕೇಶ್ ನಿಡ್ಡೋಡಿ ಇವರ ಸಹಕಾರದಿಂದ ನಮ್ಮ ಶಾಲಾ ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶ ಭರಿತ ಆಹಾರ ಸಾಮಾಗ್ರಿ ಹಾಗೂ ಉತ್ತಮ ವಿದ್ಯಾಭ್ಯಾಸಕ್ಕಾಗಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ವತಿಯಿಂದ ಹಾಗೂ ಬನ್ನಡ್ಕ ಪಯೋನೀರ್ ಇಂಡಸ್ಟ್ರೀಸ್ ಮಾಲಕರ ಪ್ರಾಯೋಜಕತ್ವದಲ್ಲಿ ಮಕ್ಕಳಿಗೆ ಬರೆಯುವ ಪುಸ್ತಕ ಹಾಗೂ ಲೇಖನಿ ಸಾಮಾಗ್ರಿಗಳನ್ನು ದಿನಾಂಕ 06-07-2021 ರಂದು ವಿತರಿಸಲಾಯಿತು. ಇವರೆಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ.
* ಅಧ್ಯಕ್ಷರು ಹಾಗೂ ಸದಸ್ಯರು, ಶಾಲಾಭಿವೃದ್ಧಿ ಸಮಿತಿ
* ಮುಖ್ಯೋಪಾಧ್ಯಾಯರು ಹಾಗೂ ಸಹ ಶಿಕ್ಷಕರು,
* ಪೋಷಕರು ಹಾಗೂ ವಿದ್ಯಾರ್ಥಿಗಳು.