Mysore Diversity

Mysore Diversity

Share

Contact information, map and directions, contact form, opening hours, services, ratings, photos, videos and announcements from Mysore Diversity, Education & Learning, Bannikuppe village and Post, Mysore.

YT Link https://youtube.com/@mysurudiversity?si=2He7ejhDYXJUUySe

Subscribe And support

wildlife, Animal world and wildlife curiosity, the wonder of the world right at your fingertips....
Follow us on Facebook- MYSORE DIVERSITY'

HIV ಇದ್ದರೆ ಈ ರಕ್ತ ಪರೀಕ್ಷೆಯಲ್ಲಿ 12 ಗಂಟೆಯಲ್ಲೇ ಗೊತ್ತಾಗುತ್ತೆ | HIV Blood Test | Mysuru Diversity 18/06/2026

HIV ಇದ್ದರೆ ಈ ರಕ್ತ ಪರೀಕ್ಷೆಯಲ್ಲಿ 12 ಗಂಟೆಯಲ್ಲೇ ಗೊತ್ತಾಗುತ್ತೆ? ರಕ್ತದಾನ ಎಷ್ಟು ಸಮಯಕ್ಕೊಮ್ಮೆ ಮಾಡಬೇಕು? ರಕ್ತದಾನ ಮಾಡುವ ಸ್ಕ್ರೀನಿಂಗ್‌ ಟೆಸ್ಟ್‌ ಹೇಗೆ ನಡೆಯುತ್ತೆ? - ಇಲ್ಲಿದೆ ಮಾಹಿತಿ! | HIV Blood Test | Mysuru Diversity

​ ​ ​ ​ ​ ​ ​ ​ ​ ​ ​ ​ BloodConnect

HIV ಇದ್ದರೆ ಈ ರಕ್ತ ಪರೀಕ್ಷೆಯಲ್ಲಿ 12 ಗಂಟೆಯಲ್ಲೇ ಗೊತ್ತಾಗುತ್ತೆ | HIV Blood Test | Mysuru Diversity HIV ಇದ್ದರೆ ಈ ರಕ್ತ ಪರೀಕ್ಷೆಯಲ್ಲಿ 12 ಗಂಟೆಯಲ್ಲೇ ಗೊತ್ತಾಗುತ್ತೆ | HIV Bloo...

14/06/2026

ಪರ್ಮನೆಂಟ್ ಮಾಡಿಸ್ತೀನಿ ಅಂದೋರಿಗೆ ದುಡ್ಡು ಕೊಡೋಕೆ ಹೋಗ್ಬೇಡಿ - ಯು.ಟಿ ಖಾದರ್ ಮರೆ

UT Khader

Photos from Mysore Diversity's post 13/06/2026

KRS ಹಿನ್ನೀರಿನಲ್ಲಿ ಮುಳುಗಿದ್ದ ದೇವಸ್ಥಾನ ಗೋಚರ – ಫೋಟೋಶೂಟ್‌ ನಲ್ಲಿ ಮಿಂಚಿದ ನಮ್ರತಾ ಗೌಡ

Kannada Filmibeat

13/06/2026

ಭ್ರಷ್ಟಾಚಾರ ಮುಕ್ತ ಹಾಗೂ ಜನಪರ ಆಡಳಿತ ನಮ್ಮ ಸರ್ಕಾರದ ಸಂಕಲ್ಪ: ಡಿಕೆ ಶಿವಕುಮಾರ್

ಮುಖ್ಯಮಂತ್ರಿ ಸುದ್ದಿಗೋಷ್ಠಿಯ ಮುಖ್ಯಾಂಶಗಳು

ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೀಡಿದ ಪ್ರಮುಖ ನಿರ್ದೇಶನಗಳು‌ ಹಾಗೂ ಈ ನಿಮಿತ್ತ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಹಂಚಿಕೊಂಡ ಪ್ರಮುಖ ವಿಚಾರಗಳು:

• ಟೀಮ್ ಕರ್ನಾಟಕ: ನಾವೆಲ್ಲರೂ ಒಂದೇ ತಂಡ, ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ. ಸಮಸ್ಯೆಯೊಂದಿಗೆ ಬಂದ ಜನರಿಗೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು. ಅಧಿಕಾರಿಗಳ ವರ್ಗದಲ್ಲಿ ನಾವು ಸಾಮಾಜಿಕ ನ್ಯಾಯವನ್ನು ಪಾಲಿಸುತ್ತೇವೆ.

• 0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು. ನಾವು ಭ್ರಷ್ಟಾಚಾರ ಮುಕ್ತ ಕರ್ನಾಟಕ ನಿರ್ಮಿಸೋಣ. ಯಾರಾದರೂ ಕಾನೂನು ವಿರುದ್ಧ ಕೆಲಸ ಮಾಡಲು ಒತ್ತಡ ಹಾಕಲು ಬಂದರೆ ಕೂಡಲೇ ನನಗೆ ಮಾಹಿತಿ ನೀಡಿ.

• ರೌಡಿಸಂ & ಡ್ರಗ್ಸ್ ಮುಕ್ತ: ಗಾಂಜಾ, ಡ್ರಗ್ಸ್ ಹಾಗೂ ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಪ್ರತಿ ಪೊಲೀಸ್ ಠಾಣೆಯಲ್ಲಿ ಐದು ಪೊಲೀಸರ ತಂಡವನ್ನು ರಚಿಸಿ ರೌಡಿಸಂ ನಿಗ್ರಹಕ್ಕೆ ಸೂಚಿಸಿದ್ದೇನೆ. ನಕಲಿ ಫೈನಾನ್ಸ್‌ಗಳ ಹಾವಳಿಯನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು.

• ಶಿಕ್ಷಣಕ್ಕೆ ಆದ್ಯತೆ: ವಿದ್ಯಾರ್ಥಿಗಳ ಸಮವಸ್ತ್ರ, ಶೂ, ಪಠ್ಯ ಪುಸ್ತಕ ಮುಂದಿನ ಒಂದು ತಿಂಗಳಲ್ಲಿ ವಿತರಣೆಯಾಗಬೇಕು. ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ನೂತನ ಸಿಎಸ್ಆರ್ (CSR) ನೀತಿ ತರುತ್ತಿದ್ದೇವೆ.

• ಮಳೆ ಕೊರತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ: ಬಿತ್ತನೆ ಕಾರ್ಯ ಶುರುವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಲಭ್ಯತೆಗೆ ಕ್ರಮವಹಿಸಬೇಕು. ಎಲ್ ನಿನೋ ಪ್ರಭಾವ ಬೀರುವ ಸಾಧ್ಯತೆ ಇದ್ದು, ಅಲ್ಪಾವಧಿ ಮಳೆ ಮುನ್ಸೂಚನೆ ಇದೆ. 30% ಮಳೆ ಕೊರತೆ ಇದ್ದು, ಮೇವಿನ ಪೂರೈಕೆಗೆ ಕ್ರಮ ಕೈಗೊಳ್ಳಬೇಕು.

• ಗ್ಯಾರಂಟಿ ಪರಿಷ್ಕರಣೆ: ನಾವು ಯೋಜನೆಯನ್ನು ನಿಲ್ಲಿಸುವುದಿಲ್ಲ, ಯಾರನ್ನೂ ತೆಗೆದುಹಾಕುವ ಉದ್ದೇಶವಿಲ್ಲ. ಸರಿಯಾದ ಮಾಹಿತಿ ಇರುವ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಬೇಕು ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆಗೆ ಪುನಃ ಅರ್ಜಿ ಪಡೆಯಲಾಗುವುದು.

• ಮತದಾನದ ಹಕ್ಕು ರಕ್ಷಣೆ: ಮತದಾನದ ಹಕ್ಕಿಲ್ಲವಾದರೆ ಸರ್ಕಾರದ ಐದು ಗ್ಯಾರಂಟಿಗಳು, ಪಿಂಚಣಿ ಸಿಗುವುದಿಲ್ಲ. ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಬಿಎಲ್ಒಗಳು ನೀಡುವ ಎನ್ಯುಮರೇಷನ್ ಅರ್ಜಿಯನ್ನು ಸಲ್ಲಿಸಿ ಮತದಾನದ ಹಕ್ಕನ್ನು ಉಳಿಸಿಕೊಳ್ಳಬೇಕು. ವಾಸ ಪ್ರಮಾಣ ಪತ್ರ ಇಲ್ಲದವರಿಗೆ ಅದನ್ನು ಶೀಘ್ರವೇ ನೀಡಲು ಸೂಚಿಸಲಾಗಿದೆ.

• ಉದ್ಯೋಗ ವಿನಿಮಯ ಮತ್ತು ಭಾರತ್ ಜೋಡೋ ಯುವಕರ ಸಂಘ: ಸ್ಥಳೀಯ ಯುವಕರಿಗೆ ಉದ್ಯೋಗ ಕಲ್ಪಿಸಲು ಖಾಸಗಿ ಉದ್ಯೋಗ ವಿನಿಮಯದ ಮೂಲಕ ಯುವ ಯುಗ ಆರಂಭಿಸುತ್ತಿದ್ದೇವೆ. ಯುವಕರ ಪ್ರತಿಭೆಗಳ ಅನಾವರಣಕ್ಕೆ ರಾಜಕೀಯೇತರ 'ಭಾರತ್ ಜೋಡೋ ಯುವಕರ ಸಂಘ' ರಚಿಸಿ, ವಾರ್ಷಿಕ ₹10 ಲಕ್ಷ ಅನುದಾನ ನೀಡಲಾಗುವುದು. ಇದು ನನ್ನ ಕನಸಿನ ಯೋಜನೆಯಾಗಿದೆ.

• ವರ್ತುಲ ರಸ್ತೆ ಯೋಜನೆ: ಸುಗಮ‌ ಸಂಚಾರಕ್ಕಾಗಿ ಎಲ್ಲಾ ತಾಲ್ಲೂಕುಗಳಲ್ಲಿ ವರ್ತುಲ ರಸ್ತೆ ನಿರ್ಮಿಸಲು, ಗ್ರಿಡ್ ರೂಪಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

DK Shivakumar Indian National Congress BJP Karnataka

10/06/2026

ವೈಫಲ್ಯ ಕಾಂಗ್ರೆಸ್‌ನದ್ದು, ಕಳಂಕ ಕಟ್ಟಿದ್ದು ಹಿಂದೂಗಳ ತಲೆಗೆ - ಪ್ರಧಾನಿ ಮೋದಿ ತೀವ್ರ ವಾಗ್ದಾಳಿ

ದೀರ್ಘಕಾಲ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ - NDA ಸರ್ಕಾರ ದೇಶದ ಭವಿಷ್ಯವನ್ನೇ ಬದಲಾಯಿಸಿದೆ ; ಮೋದಿ ಬಣ್ಣನೆ

ನೆಹರೂ ದಾಖಲೆ ಮುರಿದ ಪ್ರಧಾನಿ ಮೋದಿಗೆ ಎನ್‌ಡಿಎ ನಾಯಕರಿಂದ ಅಭಿನಂದನೆ

BJP Karnataka Indian National Congress

07/06/2026

ಯಬ್ಬಾ..! ಬೇಟೆಯಾಡಿ ಮನೆಯಂಗಳಕ್ಕೆ ಬಂದ 12 ಅಡಿ ಉದ್ದದ ಹೆಬ್ಬಾವು!!!

ಮಳೆ ಬಂದ್ರೆ ಸಾಕು ಹಾವುಗಳು ಆಹಾರ ಅರಸಿ ಎಲ್ಲೆಂದರಲ್ಲಿ ಬರುವುದು ಸಾಮಾನ್ಯ ವಾಗಿದೆ. ಬಹುತೇಕ ಅರಣ್ಯವನ್ನೇ ಹೊಂದಿರುವ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಸನಮಾಡ್ ಗ್ರಾಮದಲ್ಲಿ ವೆಕ್ತಿಯೋರ್ವರ ಮನೆಯ ಅಂಗಳದಲ್ಲಿ
ಸುಮಾರು 10 ರಿಂದ 12 ಅಡಿ ಉದ್ದದ ಹೆಬ್ಬಾವು
ಯಾವುದೋ ಪ್ರಾಣಿಯನ್ನು ನುಂಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮನೆಯ ಮಾಲೀಕರ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಉರಗಪ್ರೇಮಿ ರಜಾಕ್ ಶಾ ಆಗಮಿಸಿ ಹೆಬ್ಬಾವನ್ನು ರಕ್ಷಣೆ ಮಾಡಿ ನಂತರ ಸ್ಥಳೀಯ ಅರಣ್ಯದಲ್ಲಿ ಬಿಟ್ಟಿದ್ದಾರೆ.

05/06/2026

ಜಮೀರ್ ಅಹ್ಮದ್‌ಗೆ ಸಸ್ಪೆಂಡ್ ಮಾಡ್ರಿ ಅಂತ ಹಿಂಡೈರೆಕ್ಟ್ ಆಗಿ ಹೇಳಿಕೆ ಕೊಟ್ಟಿರೋದನ್ನ ನೋಡಿದೆ: ಮಾಜಿ ಶಾಸಕ ಅಜ್ಜಂಫೀರ ಖಾದ್ರಿ

ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ಕೊಡ ಬೇಕು. ಅಲ್ಪಸಂಖ್ಯಾತರ ಬಲಿಷ್ಠ ನಾಯಕ ಅವರು. ಪಕ್ಷ ಸಂಘಟನೆ ಮಾಡುವಲ್ಲಿ ಮತ್ತು ಚುನಾವಣೆಗಳಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಮಾಜಿ ಶಾಸಕ ಮತ್ತು ಹೆಸ್ಕಾಂ ಅದ್ಯಕ್ಷ ಅಜ್ಜಂಪೀರ್ ಖಾದ್ರಿ ಹೇಳಿದ್ದಾರೆ.

05/06/2026

ಜಮೀರ್ ಅಹ್ಮದ್ ಅವರಿಗೆ ಸಿಎಂ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಹಾವೇರಿಯಲ್ಲಿ ಅಭಿಮಾನಿಗಳಿಂದ ಪ್ರತಿಭಟನೆ

05/06/2026

ಮಂತ್ರಿ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

ಕೊಟ್ಟ ಮಾತು ತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದೇನೆ: ರಾಮಲಿಂಗಾ ರೆಡ್ಡಿ

04/06/2026

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ಡಿವೋರ್ಸ್ ಕಹಿ ಸುದ್ದಿ! ನಾಲ್ಕು ವರ್ಷಗಳ ವೈವಾಹಿಕ ಜೀವನಕ್ಕೆ ಗುಡ್‌ಬೈ ಹೇಳಲು ಮುಂದಾದ ಬಿಗ್ ಬಾಸ್ ಖ್ಯಾತಿಯ ನಟಿ ಶುಭಾ ಪೂಂಜಾ ಮತ್ತು ಸುಮಂತ್ ಬಿಲ್ಲವ ಜೋಡಿ.

ಪರಸ್ಪರ ಒಪ್ಪಿಗೆಯೊಂದಿಗೆ ವಿಚ್ಛೇದನಕ್ಕಾಗಿ ಫ್ಯಾಮಿಲಿ ಕೋರ್ಟ್‌ಗೆ ಅರ್ಜಿ ಸಲ್ಲಿಕೆ.

Want your school to be the top-listed School/college in Mysore?

Click here to claim your Sponsored Listing.

Location

Telephone

Website

Address


Bannikuppe Village And Post
Mysore
571105