Shrikrishna Institutions Patte

Shrikrishna Institutions Patte Empowering young minds through quality education since 1951.

We nurture academic excellence, discipline, and holistic development to shape responsible citizens of tomorrow.

05/05/2026
SSLC Results 2026 - 100%Congratulations
23/04/2026

SSLC Results 2026 - 100%

Congratulations

09/04/2026

Attacking machine (shooter) ನಲ್ಲಿ ಅಭ್ಯಾಸನಿರತ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಕ್ರೀಡಾ ಶಿಬಿರಾರ್ಥಿಗಳು

We are glad to introduce new volleyball practice equipment for our students. This addition will help them improve their ...
07/04/2026

We are glad to introduce new volleyball practice equipment for our students. This addition will help them improve their skills, teamwork, and overall fitness.

ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ  ಶ್ರೀ ರಾಮನವಮಿ ಆಚರಣೆ ಮತ್ತು ಆಕಾಶಕ್ಕೆ ಏಣಿ ಬೇಸಿಗೆ ಶಿಬಿರ,   ಪಟ್ಟೆ ಬಡಗನ್ನೂರು: “ ಶ್ರೀರಾಮಚಂದ್...
27/03/2026

ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ಶ್ರೀ ರಾಮನವಮಿ ಆಚರಣೆ ಮತ್ತು ಆಕಾಶಕ್ಕೆ ಏಣಿ ಬೇಸಿಗೆ ಶಿಬಿರ,
ಪಟ್ಟೆ ಬಡಗನ್ನೂರು: “ ಶ್ರೀರಾಮಚಂದ್ರರ ಆದರ್ಶ ಗುಣಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜೆಗಳಾಗಿ” ಎಂದು ವಿದ್ಯಾರ್ಥಿಗಳಿಗೆ ಶ್ರೀ ಗಣರಾಜ ಕುಂಬ್ಳೆಯವರು ಕರೆ ನೀಡಿದರು.
ಅವರು ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ನಡೆದ ರಾಮ ನವಮಿ ದಿನಾಚರಣೆ ಹಾಗೂ ದಿನಾಂಕ 27/03/2026 ರಿಂದ 31/03/2026 ರವರೆಗೆ ನಡೆಯುವ ಆಕಾಶಕ್ಕೆ ಏಣಿ ಎಂಬ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ, ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿಗಳು ತಮ್ಮ ಅರಿವು ಮತ್ತು ಕೌಶಲಗಳನ್ನು ಹೆಚ್ಚಿಸಿಕೊಳ್ಳಬೇಕೆಂದು ತಿಳಿಸಿದರು.
ಪ್ರಾಸ್ತಾವಿಕ ಮಾತುಗಳನ್ನಾಡಿದ ಸಂಸ್ಥೆಯ ಸಂಚಾಲಕರಾದ ಶ್ರೀ ವಿಘ್ನೇಶ್ ಹಿರಣ್ಯರವರು ಶಿಕ್ಷಣವು ಕೇವಲ ಪಠ್ಯ ಬೋಧನೆಗೆ ಮಾತ್ರವಲ್ಲ ಮಗುವಿನ ಸರ್ವತೋಮುಖ ಬೆಳವಣಿಗೆಗೆ ಶಿಬಿರವು ಪೂರಕವಾಗಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರತಿಭಾ ಪ್ರೌಢಶಾಲೆಯ SDMC ಅಧ್ಯಕ್ಷರಾದ ಶ್ರೀಯುತ ಲಿಂಗಪ್ಪಗೌಡ ಮೋಡಿಕೆ, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ SDMC ಅಧ್ಯಕ್ಷರಾದ ಶ್ರೀ ಕೇಶವಪ್ರಸಾದ್ ನೀಲಗಿರಿ, ಪ್ರೌಢಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಸುಮನಾ ಬಿ ಮಾತಾಜಿರವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕರ್ನಾಟಕ ಪರೀಕ್ಷಾ ಮಂಡಳಿಯಿಂದ ನಡೆಸಲ್ಪಟ್ಟ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು. 9 ನೇ ತರಗತಿಯ ಆದಿತ್ಯ ಕೃಷ್ಣ ಸ್ವಾಗತಿಸಿ, 9 ನೇ ತರಗತಿಯ ಜೀವಿತಾ ಹೆಚ್ ಧನ್ಯವಾದವನ್ನಿತ್ತರು. 9 ನೇ ತರಗತಿಯ ವಿಸ್ಮಿತಾ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಎಲ್ಲಾ ಶಿಕ್ಷಕವೃಂದದವರು ಉಪಸ್ಥಿತರಿದ್ದರು.
ಆಕಾಶಕ್ಕೆ ಏಣಿ ಬೇಸಿಗೆ ಶಿಬಿರದ ಮೊದಲ ದಿನ ವಿದ್ಯಾರ್ಥಿಗಳಿಂದ ಚಿಂತನೆ ಮತ್ತು ಶಿಬಿರ ಗೀತೆಯನ್ನು ಹಾಡಿಸಲಾಯಿತು. ಐದು ದಿನದ ಶಿಬಿರದಲ್ಲಿ ಸಾಮಾನ್ಯ ಜ್ಞಾನ, ಹಸ್ತಾಕ್ಷರ,ಯಕ್ಷಗಾನ ಮುಖ ವರ್ಣಿಕೆ, ನಾಯಕತ್ವ,ಕ್ರಾಫ್ಟ್, ಗ್ರಾಮ ಅಭಿಯಾನ,ಕಥಾ ರಚನೆ,ಕವಿತಾ ರಚನೆ, ಕ್ಲೇ ಮಾಡಲಿಂಗ್, ವಿಜ್ಞಾನ ಮಾದರಿ, ಫ್ಲಾಶ್ ಕಾರ್ಡುಗಳ ತಯಾರಿಯ ಬಗ್ಗೆ ತರಬೇತಿಯನ್ನು ನೀಡಲಾಗುತ್ತದೆ. ಈ ಶಿಬಿರವು ದ್ಡಾರಕಾ ಪ್ರತಿಷ್ಠಾನ(ರಿ.) ಪುತ್ತೂರು ಇದರ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಭಟ್ ಇವರ ಮಾರ್ಗದರ್ಶನದಲ್ಲಿ ನಡೆಯಿತು.

Sports Camp 2026Shrikrishna Educational Institutions Patte.
23/03/2026

Sports Camp 2026

Shrikrishna Educational Institutions Patte.

Register Now.
14/03/2026

Register Now.

Congratulations
11/03/2026

Congratulations

ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ಕರಾಟೆ ಬೆಲ್ಟ್ ಪರೀಕ್ಷೆ.ಪಟ್ಟೆ ಬಡಗನ್ನೂರು: ದಿನಾಂಕ 23-02-2026ನೇ ಸೋಮವಾರದಂದು ದ್ವಾರಕಾ ಪ್ರತಿಷ್ಠ...
25/02/2026

ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ಕರಾಟೆ ಬೆಲ್ಟ್ ಪರೀಕ್ಷೆ.
ಪಟ್ಟೆ ಬಡಗನ್ನೂರು: ದಿನಾಂಕ 23-02-2026ನೇ ಸೋಮವಾರದಂದು ದ್ವಾರಕಾ ಪ್ರತಿಷ್ಠಾನ(ರಿ.) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ಕರಾಟೆ ಯಲ್ಲೋ ಬೆಲ್ಟ್ ಪರೀಕ್ಷೆ ನಡೆಸಲಾಯಿತು. ಕರ್ನಾಟಕ ಚೀಫ್ ಇನ್ಸ್ಪೆಕ್ಟರ್ IASKA 6th Dan Black Belt ಶಿಹಾನ್ ಟಿ.ಡಿ ಥೋಮಸ್ ಇವರು ಮುಖ್ಯ ತೀರ್ಪುಗಾರರಾಗಿ ಪರೀಕ್ಷೆಯನ್ನು ನಡೆಸಿದರು. ಈ ಪರೀಕ್ಷೆಯಲ್ಲಿ ಸಂಸ್ಥೆಯ ಒಟ್ಟು 28 ವಿದ್ಯಾರ್ಥಿಗಳು ಹಾಜರಾಗಿ ಉತ್ತೀರ್ಣಗೊಂಡಿದ್ದಾರೆ. ಇವರೊಂದಿಗೆ ಸಂಸ್ಥೆಯ ಮುಖ್ಯ ಕರಾಟೆ ತರಬೇತುದಾರರಾದ ಶ್ರೀ ಶೇಖರ್ ಮಾಡಾವು ಇವರು ಸಹ ತೀರ್ಪುಗಾರರಾಗಿ ಸಹಕರಿಸಿದರು. ಸಮರ ಅಭ್ಯಾಸ ಕಲೆಗಳಲ್ಲಿ ಒಂದಾಗಿರುವ ಕರಾಟೆಯನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಕಲಿಸಲಾಗಿದ್ದು ಇದು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದೆ ಮತ್ತು ಸುಸಂಸ್ಕೃತ ಸಮಾಜವನ್ನು ನಿರ್ಮಿಸುವಲ್ಲಿ ಸಂಸ್ಥೆಯು ಕಟ್ಟಿಬದ್ದವಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣ ಭಟ್ ತಿಳಿಸಿದರು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಶ್ರೀಯುತ ವಿಘ್ನೇಶ್ ಹಿರಣ್ಯರವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರೌಢ ಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಸುಮನ ಮಾತಾಜಿ, ಪ್ರಾಥಮಿಕ ಶಾಲಾ ಮುಖ್ಯಗುರುಗಳಾದ ಶ್ರೀಮಾನ್ ರಾಜಗೋಪಾಲ್ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಶ್ರೀಮತಿ ಭವಿತಾ ಮಾತಾಜಿ ಮತ್ತು ಶ್ರೀಮತಿ ಚಿತ್ರ ಮಾತಾಜಿಯವರು ಸಹಕರಿಸಿದರು.

ಶ್ರೀ ಕೃಷ್ಣ  ವಿದ್ಯಾಸಂಸ್ಥೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ ಕಾರ್ಯಕ್ರಮ. ಪಟ್ಟೆ ಬಡಗನ್ನೂರು : ದ್ವಾರಕಾ ...
09/02/2026

ಶ್ರೀ ಕೃಷ್ಣ ವಿದ್ಯಾಸಂಸ್ಥೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ ಕಾರ್ಯಕ್ರಮ.
ಪಟ್ಟೆ ಬಡಗನ್ನೂರು : ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷಾಪೂರ್ವ ತಯಾರಿ ತರಬೇತಿ ಕಾರ್ಯಕ್ರಮ ದಿನಾಂಕ 09/02/2026 ನೇ ಸೋಮವಾರ ಶಾಲಾ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ನಿರ್ದೇಶಕರಾದ ಶ್ರೀಮಾನ್ ಗಣರಾಜ ಕುಂಬ್ಳೆಯವರು ದೀಪ ಬೆಳಗಿಸಿ ಉದ್ಘಾಟಿಸಿ 10ನೇ ತರಗತಿಯು ಜೀವನದಲ್ಲಿ ಅತ್ಯಂತ ಮುಖ್ಯವಾದ ಹಂತವಾಗಿದ್ದು, ಈ ತರಬೇತಿಯು ಮುಂದಿನ ಪರೀಕ್ಷೆಗೆ ಅಡಿಪಾಯವಾಗಲಿದೆ ಎಂದರು. ಶ್ರೀ ಜಿ ಎಸ್ ಶಶಿಧರ್ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಮಂಗಳೂರು ಇವರು ಆನ್ ಲೈನ್ ಮುಖಾಂತರ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ತದನಂತರ ಶ್ರೀ ನಾರಾಯಣ ಕೆ ನಿವೃತ್ತ ಮುಖ್ಯಗುರುಗಳು ಸರಕಾರಿ ಪ್ರೌಢಶಾಲೆ ಉಪ್ಪಳಿಗೆ ಇವರು ಪರೀಕ್ಷಾ ನೀಲನಕಾಶೆಯ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರೌಢಶಾಲಾ ವಿಭಾಗದ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀಯುತ ಲಿಂಗಪ್ಪಗೌಡ ಮೋಡಿಕೆ, ಸಂಚಾಲಕರಾದ ಶ್ರೀಯುತ ವಿಘ್ನೇಶ್ ಹಿರಣ್ಯ, ಪ್ರೌಢಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಸುಮನಾ ಬಿ ಮಾತಾಜಿ ಉಪಸ್ಥಿತರಿದ್ದರು. ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀ ವಿಘ್ನೇಶ್ ಹಿರಣ್ಯ ಅವರು ಸ್ವಾಗತಿಸಿ, ಪ್ರೌಢಶಾಲಾ ಮುಖ್ಯಗುರುಗಳಾದ ಶ್ರೀಮತಿ ಸುಮನಾ ಬಿ ಮಾತಾಜಿ ವಂದಿಸಿದರು. ವಿಜ್ಞಾನ ಶಿಕ್ಷಕಿ ಶ್ರೀಮತಿ ಭವಿತಾ ಪಿ ಮಾತಾಜಿ ಅವರು ಕಾರ್ಯಕ್ರಮ ನಿರೂಪಿಸಿದರು.

Address

Patte Badagannur Post
Puttur
574223

Opening Hours

Monday 9am - 5pm
Tuesday 9am - 5pm
Wednesday 9am - 5pm
Thursday 9am - 5pm
Friday 9am - 5pm
Saturday 9am - 5pm

Website

Alerts

Be the first to know and let us send you an email when Shrikrishna Institutions Patte posts news and promotions. Your email address will not be used for any other purpose, and you can unsubscribe at any time.

Shortcuts

Share