NES Institute of Advanced Studies

NES Institute of Advanced Studies NES Institute of Advanced Studies "विद्यया अमृतमश्नुते।"

ನಗರದ ಎನ್‌ಇಎಸ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ಇನ್ನರ್ ವೀಲ್ ಕ್ಲಬ್ ಆಫ್ ಶಿವಮೊಗ್ಗ ಈಸ್ಟ್ ಸಹಯೋಗದಲ್ಲಿ ವಿದ್ಯಾರ...
12/08/2026

ನಗರದ ಎನ್‌ಇಎಸ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ಇನ್ನರ್ ವೀಲ್ ಕ್ಲಬ್ ಆಫ್ ಶಿವಮೊಗ್ಗ ಈಸ್ಟ್ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision - SIR) ಕುರಿತು ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಶ್ರೀಮತಿ ಸುರೇಖಾ ಮುರಳೀಧರ್, ಮಾಜಿ ಉಪಮೇಯರ್, ಅವರು ಯುವ ಮತದಾರರಾದ ವಿದ್ಯಾರ್ಥಿಗಳಿಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ, ಪರಿಷ್ಕರಣೆ, ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಮತದಾನದ ಮಹತ್ವದ ಕುರಿತು ಸಮಗ್ರ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಲವರ್ಧನೆಗೆ ಜವಾಬ್ದಾರಿಯುತ ಮತದಾರರಾಗುವಂತೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇನ್ನರ್ ವೀಲ್ ಕ್ಲಬ್ ಆಫ್ ಶಿವಮೊಗ್ಗ ಈಸ್ಟ್‌ನ ಅಧ್ಯಕ್ಷೆ ಶ್ರೀಮತಿ ಮಮತಾ ಸುಧೀಂದ್ರ ವಹಿಸಿ, ಸಂಘದ ವತಿಯಿಂದ ವಿದ್ಯಾರ್ಥಿಗಳಲ್ಲಿ ಮತದಾನದ ಜಾಗೃತಿ ಮೂಡಿಸುವ ಇಂತಹ ಕಾರ್ಯಕ್ರಮಗಳ ಅಗತ್ಯತೆಯನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಶಿವಪ್ರಸಾದ್ ಬಿ. ಎಸ್. ಹಾಗೂ ಇನ್ನರ್ ವೀಲ್ ಕ್ಲಬ್‌ನ ಕಾರ್ಯದರ್ಶಿ ಶ್ರೀಮತಿ ನಿರ್ಮಲಾ ಕೆ. ಪಿ., ಸಂಘದ ಪದಾಧಿಕಾರಿಗಳು, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

08/08/26VYASANA MUKTHA BHARATH
12/08/2026

08/08/26
VYASANA MUKTHA BHARATH

*ಎನ್‌ಎಸ್‌ಎಸ್ ಉದ್ಯಾನವನದಲ್ಲಿ ಮೊದಲ ಫಲದ ಸಂಭ್ರಮ* ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ  ಆವರಣದಲ್ಲಿರುವ ದಿನ...
12/08/2026

*ಎನ್‌ಎಸ್‌ಎಸ್ ಉದ್ಯಾನವನದಲ್ಲಿ ಮೊದಲ ಫಲದ ಸಂಭ್ರಮ
*

ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ಆವರಣದಲ್ಲಿರುವ ದಿನಾಂಕ 03/08/2026ರಂದು ಉದ್ಯಾನವನದಲ್ಲಿ ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣ ನಿರ್ಮಾಣದ ಉದ್ದೇಶದಿಂದ ವಿವಿಧ ಬಗೆಯ ಹೂವಿನ ಹಾಗೂ ಹಣ್ಣಿನ ಗಿಡಗಳನ್ನು ನೆಡಲಾಗಿತ್ತು.

ಅವುಗಳಲ್ಲಿ ನೆಡಲಾಗಿದ್ದ ಬಾಳೆ ಗಿಡವು ಮೊದಲ ಬಾರಿಗೆ ಗೊನೆ ಬಿಟ್ಟಿರುವುದು ಎಲ್ಲರಿಗೂ ಸಂತಸವನ್ನುಂಟು ಮಾಡಿತು. ಈ ಹಿನ್ನೆಲೆಯಲ್ಲಿ ಇಂದು ಮೊದಲ ಫಲದ ಸಂಭ್ರಮವನ್ನು ಆಚರಿಸಿ, ಬಾಳೆ ಗಿಡಕ್ಕೆ ಪೂಜೆ ಸಲ್ಲಿಸಿ ಪ್ರಕೃತಿಯ ಕೊಡುಗೆಯನ್ನು ಕೃತಜ್ಞತೆಯಿಂದ ಸ್ಮರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ಎಲ್ಲರಿಗೂ ಸಿಹಿ ಹಂಚುವ ಮೂಲಕ ಸಂಭ್ರಮವನ್ನು ಹಂಚಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಲಘು ಉಪಹಾರದ ವ್ಯವಸ್ಥೆಯನ್ನೂ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಡಾ ಶಿವಪ್ರಸಾದ್ ಬಿಎಸ್ ಮತ್ತು ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಕಾರ್ಗಿಲ್ ವಿಜಯ ದಿವಸ್ ಹಾಗೂ ಬೃಹತ್ ರಕ್ತದಾನ ಶಿಬಿರ ಯಶಸ್ವಿನಗರದ ಎನ್.ಇ.ಎಸ್. ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ದಿ...
12/08/2026

ಕಾರ್ಗಿಲ್ ವಿಜಯ ದಿವಸ್ ಹಾಗೂ ಬೃಹತ್ ರಕ್ತದಾನ ಶಿಬಿರ ಯಶಸ್ವಿ
ನಗರದ ಎನ್.ಇ.ಎಸ್. ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ದಿನಾಂಕ 27/07/2026 ರಂದು ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಘಟಕ-1 ಹಾಗೂ 2, ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ ಸಂಜೀವಿನಿ ರಕ್ತ ನಿಧಿ, ಶಿವಮೊಗ್ಗ ಇವರ ಸಹಯೋಗದಲ್ಲಿ ಕಾರ್ಗಿಲ್ ವಿಜಯ ದಿವಸ್ ಹಾಗೂ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಹಕಾರ್ಯದರ್ಶಿಗಳಾದ ಡಾ. ಪಿ. ನಾರಾಯಣ ಉದ್ಘಾಟಿಸಿ ಮಾತನಾಡಿ, "ರಕ್ತದಾನ ಮಾಡುವುದು ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯ ಸಾಮಾಜಿಕ ಜವಾಬ್ದಾರಿಯಾಗಿದೆ. ನಮ್ಮ ಒಂದು ಯೂನಿಟ್ ರಕ್ತ ಮತ್ತೊಬ್ಬರ ಜೀವ ಉಳಿಸುವ ಅಮೂಲ್ಯ ಕೊಡುಗೆಯಾಗಿದೆ" ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಂತರರಾಷ್ಟ್ರೀಯ ವಿಪತ್ತು ನಿರ್ವಹಣಾ ತರಬೇತುದಾರರಾದ ಡಾ. ಕುಮಾರ್ ವಿ.ಎಲ್.ಎಸ್. ಅವರು ಮಾತನಾಡಿ, "ಎಲ್ಲಾ ದಾನಗಳಲ್ಲಿ ರಕ್ತದಾನವೇ ಶ್ರೇಷ್ಠ ದಾನ. ಇದು ಯಾವುದೇ ಪ್ರತಿಫಲದ ನಿರೀಕ್ಷೆಯಿಲ್ಲದೆ ಸಮಾಜಕ್ಕೆ ಸಲ್ಲಿಸುವ ಮಹತ್ಕಾರ್ಯವಾಗಿದೆ. ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ರಕ್ತದಾನಿಗಳಾಗಬೇಕು" ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಸಂಜೀವಿನಿ ರಕ್ತ ನಿಧಿಯ ವೈದ್ಯಾಧಿಕಾರಿಗಳಾದ ಡಾ. ದಿನಕರ್ ಅವರು ವಿದ್ಯಾರ್ಥಿಗಳಿಗೆ ರಕ್ತದಾನದ ಪ್ರತಿಜ್ಞಾವಿಧಿಯನ್ನು ಬೋಧಿಸಿ, ರಕ್ತದಾನದ ಮಹತ್ವ ಮತ್ತು ಅಗತ್ಯತೆಯ ಕುರಿತು ಮಾಹಿತಿ ನೀಡಿದರು.
ಸಭಾ ಕಾರ್ಯಕ್ರಮದ ಬಳಿಕ ನಡೆದ ಬೃಹತ್ ರಕ್ತದಾನ ಶಿಬಿರವು ಯಶಸ್ವಿಯಾಗಿ ನಡೆಯಿತು. ಶಿಬಿರದಲ್ಲಿ ವಿದ್ಯಾರ್ಥಿಗಳು, ಬೋಧಕ ಹಾಗೂ ಸಿಬ್ಬಂದಿಯವರ ಉತ್ಸಾಹಭರಿತ ಭಾಗವಹಿಸುವಿಕೆಯಿಂದ ಒಟ್ಟು 125 ಯೂನಿಟ್ ರಕ್ತ ಸಂಗ್ರಹಿಸಲಾಯಿತು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ನಿರ್ದೇಶಕರಾದ ಶ್ರೀ ಅಶ್ವತ್ಥ ನಾರಾಯಣ ಶ್ರೇಷ್ಠಿ, ರೆಡ್ ಕ್ರಾಸ್ ಸಂಜೀವಿನಿ ರಕ್ತ ನಿಧಿಯ ಕಾರ್ಯದರ್ಶಿಗಳಾದ ಶ್ರೀ ಮಂಜುನಾಥ್ ಅಪ್ಪಾಜಿ, ಸಂಚಾಲಕರಾದ ಶ್ರೀ ಧರಣೇಂದ್ರ ಜೆ. ದಿನಕರ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಶಿವಪ್ರಸಾದ್ ಬಿ.ಎಸ್., ವಿವಿಧ ಘಟಕಗಳ ಕಾರ್ಯಕ್ರಮಾಧಿಕಾರಿಗಳಾದ ಈಶ್ವರ್, ಚಂದನ್, ಗುರುರಾಜ್, ವಿನಯ್ ಹಾಗೂ ಅರುಣ್ ಕುಮಾರ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

12/08/2026
26/07/26BLOOD DONATION AWARENESS PROGRAMME
12/08/2026

26/07/26
BLOOD DONATION AWARENESS PROGRAMME

23/07/26... INDUSTRY INTERNSHIP PROGRAMME
12/08/2026

23/07/26...
INDUSTRY INTERNSHIP PROGRAMME

ನಗರದ ಎನ್‌ಇಎಸ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿದಿನಾಂಕ 13-07-2026, ಸೋಮವಾರದಂದು ಅಧ್ಯಾಪಕರಿಗಾಗಿ "ಟ್ರೇಡಿಂಗ್ ಅ...
12/08/2026

ನಗರದ ಎನ್‌ಇಎಸ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿದಿನಾಂಕ 13-07-2026, ಸೋಮವಾರದಂದು ಅಧ್ಯಾಪಕರಿಗಾಗಿ "ಟ್ರೇಡಿಂಗ್ ಅಂಡ್ ಇನ್ವೆಸ್ಟ್‌ಮೆಂಟ್ ಸ್ಟ್ರಾಟೆಜಿ" ವಿಷಯದ ಕುರಿತು ಒಂದು ದಿನದ ವಿಶೇಷ ಪ್ರಾಧ್ಯಾಪಕರ ಅಭಿವೃದ್ಧಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಜೆಎನ್‌ಎನ್‌ಸಿಇ ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಹರ್ಷ ಸಿ. ಮಠದ್ ಅವರು ಭಾಗವಹಿಸಿ, ಟ್ರೇಡಿಂಗ್ ಹಾಗೂ ಹೂಡಿಕೆ ತಂತ್ರಗಳ ಮೂಲಭೂತ ಅಂಶಗಳು, ಹಣಕಾಸು ಯೋಜನೆ, ಷೇರು ಮಾರುಕಟ್ಟೆಯ ಅವಕಾಶಗಳು ಹಾಗೂ ಹೂಡಿಕೆದಾರರು ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಸಮಗ್ರವಾಗಿ ವಿವರಿಸಿದರು. ಅಲ್ಲದೆ, ಪ್ರಸ್ತುತ ಆರ್ಥಿಕ ಪರಿಸ್ಥಿತಿಯಲ್ಲಿ ವಿವೇಕಯುತ ಹೂಡಿಕೆಯ ಮಹತ್ವವನ್ನು ತಿಳಿಸಿ ಅಧ್ಯಾಪಕರೊಂದಿಗೆ ಸಂವಾದ ನಡೆಸಿದರು.
ಕಾರ್ಯಾಗಾರದಲ್ಲಿ ಕಾಲೇಜಿನ ಅಧ್ಯಾಪಕರು ಉತ್ಸಾಹದಿಂದ ಭಾಗವಹಿಸಿ, ಸಂಪನ್ಮೂಲ ವ್ಯಕ್ತಿಗಳಿಂದ ಮೌಲ್ಯಯುತ ಮಾಹಿತಿಯನ್ನು ಪಡೆದುಕೊಂಡರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಿವಪ್ರಸಾದ ಬಿ.ಎಸ್ ಮತ್ತು ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

ವೃತ್ತಿಪರ ಕೋರ್ಸ್‌ಗಳ ಕುರಿತು ಮಾಹಿತಿ ಕಾರ್ಯಾಗಾರ ನಗರದ ಎನ್‌ಇಎಸ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ಪ್ರೊಫೆಷನಲ್ ಕ್ಲಬ್...
12/08/2026

ವೃತ್ತಿಪರ ಕೋರ್ಸ್‌ಗಳ ಕುರಿತು ಮಾಹಿತಿ ಕಾರ್ಯಾಗಾರ
ನಗರದ ಎನ್‌ಇಎಸ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ಪ್ರೊಫೆಷನಲ್ ಕ್ಲಬ್ (Professional Club) ವತಿಯಿಂದ ದಿನಾಂಕ 11-07-2026ರ ಶನಿವಾರ ರಂದು ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳು, ಉನ್ನತ ಶಿಕ್ಷಣದ ಅವಕಾಶಗಳು ಹಾಗೂ ಉದ್ಯೋಗ ಕ್ಷೇತ್ರದಲ್ಲಿನ ವಿವಿಧ ಸಾಧ್ಯತೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಮಾಹಿತಿ ಕಾರ್ಯಾಗಾರವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮದ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮೈಲಾಜಿಕಲ್ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಸ್ಕೂಲ್ ಸಂಸ್ಥೆಯ ಪ್ಯಾನ್ ಇಂಡಿಯಾ ಆಡಳಿತ ಮುಖ್ಯಸ್ಥರಾದ ಲೀನಾ ಅವರು ಭಾಗವಹಿಸಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪದವಿ ಶಿಕ್ಷಣಕ್ಕೆ ಸೀಮಿತವಾಗದೆ ವೃತ್ತಿಪರ ಕೌಶಲ್ಯಗಳನ್ನು ಬೆಳೆಸಿಕೊಳ್ಳುವ ಅಗತ್ಯತೆ, ವೃತ್ತಿಪರ ಕೋರ್ಸ್‌ಗಳ ಮಹತ್ವ, ಉನ್ನತ ಶಿಕ್ಷಣದ ವಿವಿಧ ಆಯಾಮಗಳು ಹಾಗೂ ಉದ್ಯೋಗ ಕ್ಷೇತ್ರದಲ್ಲಿನ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು.
ಅಧ್ಯಕ್ಷೀಯ ಭಾಷಣದಲ್ಲಿ ಪ್ರಾಂಶುಪಾಲರಾದ ಡಾ. ಶಿವಪ್ರಸಾದ್ ಬಿ.ಎಸ್. ಅವರು, ಇಂದಿನ ಜಾಗತಿಕ ಸ್ಪರ್ಧಾತ್ಮಕ ಪರಿಸರದಲ್ಲಿ ಶೈಕ್ಷಣಿಕ ಅರ್ಹತೆಯೊಂದಿಗೆ ಕೌಶಲ್ಯಾಭಿವೃದ್ಧಿ ಮತ್ತು ವೃತ್ತಿಪರ ತರಬೇತಿ ಅತ್ಯಂತ ಅವಶ್ಯಕವಾಗಿದ್ದು, ಇಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳ ವೃತ್ತಿ ಜೀವನಕ್ಕೆ ಸ್ಪಷ್ಟ ದಿಕ್ಕು ನೀಡುವಲ್ಲಿ ಮಹತ್ತರ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರೊಫೆಷನಲ್ ಕ್ಲಬ್ ಕಾರ್ಯಕ್ರಮಾಧಿಕಾರಿಗಳಾದ ಶ್ರೀ ಗುರುರಾಜ ಎನ್,
ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಲ್ಲಿ ಹೊಸ ಭರವಸೆ ಮೂಡಿಸಿದ ‘ಅಭ್ಯುದಯ-2026’ ಪರಿಚಯಾತ್ಮಕ ಕಾರ್ಯಕ್ರಮ   ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡ...
01/07/2026

ವಿದ್ಯಾರ್ಥಿಗಳಲ್ಲಿ ಹೊಸ ಭರವಸೆ ಮೂಡಿಸಿದ ‘ಅಭ್ಯುದಯ-2026’ ಪರಿಚಯಾತ್ಮಕ ಕಾರ್ಯಕ್ರಮ

ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ಶೈಕ್ಷಣಿಕ ವರ್ಷದ ಪ್ರಥಮ ವರ್ಷದ ಬಿ.ಕಾಂ, ಬಿ.ಬಿ.ಎ ಮತ್ತು ಬಿ.ಸಿ.ಎ ನೂತನ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ ‘ಅಭ್ಯುದಯ-2026’ ಕುವೆಂಪು ರಂಗಮಂದಿರದಲ್ಲಿ
ದಿನಾಂಕ 21/06/2026ರ ಭಾನುವಾರದಂದು ಅತ್ಯಂತ ಸಂಭ್ರಮದಿಂದ ಜರುಗಿತು.ಕಾರ್ಯಕ್ರಮದ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಶಿವಮೊಗ್ಗದ ನಿವೃತ್ತ ಸಂಸ್ಕೃತ ಉಪನ್ಯಾಸಕರು ಹಾಗೂ ಖ್ಯಾತ ಸಾಹಿತಿಗಳಾದ ವಿದ್ವಾನ್ ಜಿ.ಎಸ್. ನಟೇಶ್ ಅವರು ಆಗಮಿಸಿದ್ದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, "ಪದವಿ ಶಿಕ್ಷಣವು ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಸೀಮಿತವಾಗದೆ, ಶಿಸ್ತು, ಸಂಸ್ಕಾರ ಮತ್ತು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಉನ್ನತ ಸಾಧನೆ ಮಾಡಬೇಕು" ಎಂದು ಕರೆ ನೀಡಿದರು.ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಜೀವ ಸದಸ್ಯರುಗಳಾದ ಶ್ರೀ ಕಿಶೋರ್ ಶೀರ್ನಾಳಿ, ಶ್ರೀ ಟಿ.ಎ. ರಾಮ ಪ್ರಸಾದ್ ಹಾಗೂ ಡಾ. ಭರತ್ ಎಸ್.ವಿ. ಶ್ರೀ ಆನಂದ್ ಮತ್ತು ಶ್ರೀ ಹನುಮಂತಪ್ಪ ಅವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಅತಿಥಿಗಳು, ರಾಷ್ಟ್ರೀಯ ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಶೈಕ್ಷಣಿಕ ವಾತಾವರಣವನ್ನು ಕಲ್ಪಿಸುತ್ತಿದೆ. ಇದರ ಸದುಪಯೋಗವನ್ನು ಪಡೆದುಕೊಂಡು ವಿದ್ಯಾರ್ಥಿಗಳು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಡಾ. ಶಿವಪ್ರಸಾದ್ ಬಿ.ಎಸ್. ಅವರು ಮಾತನಾಡಿ, ಹೊಸ ವಿದ್ಯಾರ್ಥಿಗಳನ್ನು ಕಾಲೇಜಿಗೆ ಆತ್ಮೀಯವಾಗಿ ಸ್ವಾಗತಿಸಿದರು. ವಿದ್ಯಾರ್ಥಿಗಳು ಕಾಲೇಜಿನ ನಿಯಮಾವಳಿಗಳನ್ನು ಪಾಲಿಸುತ್ತಾ, ಶೈಕ್ಷಣಿಕವಾಗಿ ಹಾಗೂ ವೃತ್ತಿಪರವಾಗಿ ಹೇಗೆ ಸಜ್ಜಾಗಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು.
ಈ ಪರಿಚಯಾತ್ಮಕ ಕಾರ್ಯಕ್ರಮದಲ್ಲಿ ನೂತನ ವಿದ್ಯಾರ್ಥಿಗಳು, ಅವರ ಪೋಷಕರು, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

-NESIAS

Address

JNNCE Campus, Navule
Shimoga
577204

Website

Alerts

Be the first to know and let us send you an email when NES Institute of Advanced Studies posts news and promotions. Your email address will not be used for any other purpose, and you can unsubscribe at any time.

Shortcuts

Share