15/08/2026
ಅಗಸ್ಟ್ 15, 2026 ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ 80ನೇ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಅಭಿವೃದ್ಧಿಯ ಫಲವು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿದಾಗ ಮಾತ್ರ ಸ್ವಾತಂತ್ರ್ಯದ ನಿಜವಾದ ಅರ್ಥ ಸಾಕಾರಗೊಳ್ಳುತ್ತದೆ. ಈ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ವಿಶ್ವವಿದ್ಯಾಲಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.
ನಾವು ವಿಶ್ವವಿದ್ಯಾಲಯದ ಶಿಕ್ಷಣವನ್ನು ಉದ್ಯೋಗಕ್ಕೆ ಮಾತ್ರ ಸೀಮಿತಗೊಳಿಸಬಾರದು. ಶಿಕ್ಷಣವು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸಬೇಕು. ವಿದ್ಯಾರ್ಥಿಗಳಲ್ಲಿ ಪ್ರಶ್ನಿಸುವ ಮನೋಭಾವ, ವೈಜ್ಞಾನಿಕ ದೃಷ್ಟಿಕೋನ, ಸೃಜನಶೀಲತೆ, ನಾಯಕತ್ವ, ಮಾನವೀಯತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಬೇಕು ಎಂದು ಅವರು ಸಲಹೆ ನೀಡಿದರು.
ವಿಶ್ವವಿದ್ಯಾನಿಲಯದ ಭದ್ರತಾ ಸಿಬ್ಬಂದಿಯಿAದ ಕುಲಪತಿಗಳು ಗೌರವ ವಂದನೆ ಸ್ವೀಕರಿಸಿದರು. ವೇದಿಕೆಯ ಮೇಲಿದ್ದ ಗಣ್ಯರು ಮಹಾತ್ಮ ಗಾಂಧಿ ಮತ್ತು ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಸಮಾರಂಭದಲ್ಲಿ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ, ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಹಾಗೂ ಕ್ರೀಡಾ ನಿರ್ದೇಶಕ ಹಣಮಂತಯ್ಯ ಪೂಜಾರಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಆಂತರಿಕ ಗುಣಮಟ್ಟ ಕೋಶದ ವತಿಯಿಂದ ವಿವಿಧ ಸಾಧನೆ ಮಾಡಿದ ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಆಂತರಿಕ ಗುಣಮಟ್ಟ ಕೋಶದ ನಿರ್ದೇಶಕಿ ಪ್ರೊ.ಶಾಂತಾದೇವಿ ಟಿ ಮತ್ತು ಸಹಾಯಕ ನಿರ್ದೇಶಕಿ ಡಾ,ಶ್ವೇತಾ ಬೆಂಗಾರೆ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರದರ್ಶಕ ಕಲೆ ಮತ್ತು ಸಂಗೀತ ವಿಭಾಗದ ವಿದ್ಯಾರ್ಥಿನಿಯರು ರಾಷ್ಟçಗೀತೆ, ವಂದೇಮಾತರA ಗೀತೆ ಮತ್ತು ರಾಷ್ಟಿçÃಯ ಭಾವೈಕ್ಯೆತೆಯ ಗೀತೆಗಳನ್ನು ಹಾಡಿದರು. ವಿದ್ಯಾರ್ಥಿನಿ ಕ್ಷೇಮಪಾಪಲನಾ ನಿರ್ದೇಶನಾಲಯದ ನಿರ್ದೇಶಕಿ ಪ್ರೊ.ಜ್ಯೋತಿ ಉಪಾಧ್ಯೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು