KSWU Media Cell

KSWU Media Cell This platform is for sharing ideas, opinions, thoughts, news of Dept of Journalism and Mass Communication and KSAWU Vijayapura

This platform is for sharing ideas, opinions, thoughts, news by the members of Department of Journalism and Mass Communication, Karnataka State Women's University.The group is an effort to unite the members, interact with professionals from Media around the globe. Stay connected to view the events, activities and happenings in the Department.

KSAWUV-ಡಾ. ವಿಜಯಕುಮಾರ್ ಬಿ. ಅಜೂರ್ ಮಹಿಳಾ ವಿವಿ ನೂತನ ಕುಲಸಚಿವ-newspaper coverage
25/08/2026

KSAWUV-ಡಾ. ವಿಜಯಕುಮಾರ್ ಬಿ. ಅಜೂರ್ ಮಹಿಳಾ ವಿವಿ ನೂತನ ಕುಲಸಚಿವ-newspaper coverage

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಸಚಿವ ಹುದ್ದೆಯಿಂದ  ವರ್ಗಾವಣೆ ಹೊಂದಿರುವ ಶಂಕರಗೌಡ ಸೋಮನಾಳ ಅವರನ್ನು ಕುಲಪತಿ ಪ್ರ...
24/08/2026

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಸಚಿವ ಹುದ್ದೆಯಿಂದ ವರ್ಗಾವಣೆ ಹೊಂದಿರುವ ಶಂಕರಗೌಡ ಸೋಮನಾಳ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್. ಲಕ್ಕಣ್ಣವರ ಸನ್ಮಾನಿಸಿ ಬೀಳ್ಕೊಟ್ಟರು.

ಇದೇ ಸಂದರ್ಭದಲ್ಲಿ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್. ಲಕ್ಕಣ್ಣವರ , ಬೋಧಕ ಸಿಬ್ಬಂದಿಗಳಾದ ಪ್ರೊ.ಪಿ.ಜಿ.ತಡಸದ, ಪ್ರೊ.ಓಂಕಾರ ಕಾಕಡೆ, ಪ್ರೊ.ಜಿ.ಜಿ.ರಜಪೂತ, ಪ್ರೊ.ನಾಮದೇವಗೌಡ ಮತ್ತು ಪ್ರೊ.ಸಕ್ಪಾಲ್ ಹೂವಣ್ಣ ಶಂಕರಗೌಡ ಸೋಮನಾಳ ಅವರನ್ನು ಅಭಿನಂದಿಸಿ, ವಿಶ್ವವಿದ್ಯಾಲಯದ ಸೇವೆಗೆ ನೀಡಿದ ಕೊಡುಗೆಗಾಗಿ ಕೃತಜ್ಞತೆ ಸಲ್ಲಿಸಿದರು. ಅವರ ಮುಂದಿನ ಸೇವಾ ಪಯಣ ಯಶಸ್ವಿಯಾಗಲಿ ಎಂದು ಹಾರೈಸಿದರು. ನೂತನ ಕುಲಸಚಿವ ಡಾ.ವಿಜಯಕುಮಾರ ಬಿ ಅಜೂರ್‌ ಉಪಸ್ಥಿತರಿದ್ದರು.

ಡಾ.ವಿಜಯಕುಮಾರ್ ಬಿ. ಅಜೂರ್ ಮಹಿಳಾ ವಿವಿ ನೂತನ ಕುಲಸಚಿವರಾಗಿ ಅಧಿಕಾರ ಸ್ವೀಕಾರವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ...
24/08/2026

ಡಾ.ವಿಜಯಕುಮಾರ್ ಬಿ. ಅಜೂರ್ ಮಹಿಳಾ ವಿವಿ ನೂತನ ಕುಲಸಚಿವರಾಗಿ ಅಧಿಕಾರ ಸ್ವೀಕಾರ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ.ವಿಜಯಕುಮಾರ್ ಬಿ. ಅಜೂರ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಕುಲಸಚಿವ ಶಂಕರಗೌಡ ಸೋಮನಾಳ ಅವರು ಅಧಿಕೃತವಾಗಿ ಅಧಿಕಾರ ಹಸ್ತಾಂತರಿಸಿದರು.

ನೂತನ ಕುಲಸಚಿವ ಡಾ.ವಿಜಯಕುಮಾರ್ ಬಿ. ಅಜೂರ್ ಅವರು ೨೦೧೪ರ ಬ್ಯಾಚಿನ ಕೆಎಎಸ್ ಅಧಿಕಾರಿಯಾಗಿದ್ದು ಇಂಡಿ ಮತ್ತು ಶಿರಸಿಯಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ವಿಜಯಪುರ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ, ವಿಜಯಪುರ ಜಿಲ್ಲಾ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಮತ್ತು ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ಆಯಕ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್. ಲಕ್ಕಣ್ಣವರ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಡಾ.ವಿಜಯಕುಮಾರ್ ಬಿ. ಅಜೂರ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು. ಈ ಸಂದರ್ಭದಲ್ಲಿ ಡಾ,ಅಜೂರ್‌ ಅವರು ತಮ್ಮ ಹೊಸ ಹೊಣೆಗಾರಿಕೆಯಲ್ಲಿ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.

ನೂತನ ಕುಲಸಚಿವರಾದ ಡಾ.ವಿಜಯಕುಮಾರ್ ಬಿ. ಅಜೂರ್ ಅವರಿಗೆ ವಿಶ್ವವಿದ್ಯಾಲಯದ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವಲ್ಲಿ ಯಶಸ್ಸು ದೊರೆಯಲಿ ಎಂದು ವಿಶ್ವವಿದ್ಯಾಲಯದ ಬೋಧಕ ಸಿಬ್ಬಂದಿಗಳಾದ ಪ್ರೊ.ಪಿ.ಜಿ.ತಡಸದ, ಪ್ರೊ.ಓಂಕಾರ ಕಾಕಡೆ, ಪ್ರೊ.ಜಿ.ಜಿ.ರಜಪೂತ, ಪ್ರೊ.ನಾಮದೇವಗೌಡ ಮತ್ತು ಪ್ರೊ.ಸಕ್ಪಾಲ್ ಹೂವಣ್ಣ ಆಶಿಸಿದರು.

KSAWUV-ಹಿಂದುಳಿದ ವರ್ಗಗಳ ಕೋಶ-News- Newspaper Coverage
23/08/2026

KSAWUV-ಹಿಂದುಳಿದ ವರ್ಗಗಳ ಕೋಶ-News- Newspaper Coverage

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವ...
23/08/2026

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರನ್ನು ಬೆಂಗಳೂರಿನಲ್ಲಿ ಶನಿವಾರ ಭೇಟಿ ಮಾಡಿ ಮಹಿಳಾ ವಿಶ್ವವಿದ್ಯಾನಿಲಯದ ಸಮಗ್ರ ಅಭಿವೃದ್ದಿ ಕುರಿತು ಚರ್ಚಿಸಿದರು.

23/08/2026
KSAWUV- ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 2026–27ನೇ ಸಾಲಿನ ಸ್ನಾತಕೋತ್ತರ ಹಾಗೂ ಪಿಜಿ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಾತ...
19/08/2026

KSAWUV- ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 2026–27ನೇ ಸಾಲಿನ ಸ್ನಾತಕೋತ್ತರ ಹಾಗೂ ಪಿಜಿ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಾತಿ ಘಟಕದ ಸಹಯೋಗದಲ್ಲಿ ಬುಧವಾರ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ನೂತನ ವಿದ್ಯಾರ್ಥಿನಿಯರ ಪ್ರವೇಶಾತಿ ಕಾರ್ಯಕ್ರಮಕ್ಕೆ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಚಾಲನೆ ನೀಡಿದರು.

KSAWUV- INDEPENDENCE  DAY New-Program-Newspaper Coverage
17/08/2026

KSAWUV- INDEPENDENCE DAY New-Program-Newspaper Coverage

ಅಗಸ್ಟ್ 15, 2026 ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ 80ನೇ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ...
15/08/2026

ಅಗಸ್ಟ್ 15, 2026 ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ 80ನೇ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಅಭಿವೃದ್ಧಿಯ ಫಲವು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿದಾಗ ಮಾತ್ರ ಸ್ವಾತಂತ್ರ‍್ಯದ ನಿಜವಾದ ಅರ್ಥ ಸಾಕಾರಗೊಳ್ಳುತ್ತದೆ. ಈ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ವಿಶ್ವವಿದ್ಯಾಲಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.

ನಾವು ವಿಶ್ವವಿದ್ಯಾಲಯದ ಶಿಕ್ಷಣವನ್ನು ಉದ್ಯೋಗಕ್ಕೆ ಮಾತ್ರ ಸೀಮಿತಗೊಳಿಸಬಾರದು. ಶಿಕ್ಷಣವು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸಬೇಕು. ವಿದ್ಯಾರ್ಥಿಗಳಲ್ಲಿ ಪ್ರಶ್ನಿಸುವ ಮನೋಭಾವ, ವೈಜ್ಞಾನಿಕ ದೃಷ್ಟಿಕೋನ, ಸೃಜನಶೀಲತೆ, ನಾಯಕತ್ವ, ಮಾನವೀಯತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಬೇಕು ಎಂದು ಅವರು ಸಲಹೆ ನೀಡಿದರು.

ವಿಶ್ವವಿದ್ಯಾನಿಲಯದ ಭದ್ರತಾ ಸಿಬ್ಬಂದಿಯಿAದ ಕುಲಪತಿಗಳು ಗೌರವ ವಂದನೆ ಸ್ವೀಕರಿಸಿದರು. ವೇದಿಕೆಯ ಮೇಲಿದ್ದ ಗಣ್ಯರು ಮಹಾತ್ಮ ಗಾಂಧಿ ಮತ್ತು ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಸಮಾರಂಭದಲ್ಲಿ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ, ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಹಾಗೂ ಕ್ರೀಡಾ ನಿರ್ದೇಶಕ ಹಣಮಂತಯ್ಯ ಪೂಜಾರಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಆಂತರಿಕ ಗುಣಮಟ್ಟ ಕೋಶದ ವತಿಯಿಂದ ವಿವಿಧ ಸಾಧನೆ ಮಾಡಿದ ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಆಂತರಿಕ ಗುಣಮಟ್ಟ ಕೋಶದ ನಿರ್ದೇಶಕಿ ಪ್ರೊ.ಶಾಂತಾದೇವಿ ಟಿ ಮತ್ತು ಸಹಾಯಕ ನಿರ್ದೇಶಕಿ ಡಾ,ಶ್ವೇತಾ ಬೆಂಗಾರೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರದರ್ಶಕ ಕಲೆ ಮತ್ತು ಸಂಗೀತ ವಿಭಾಗದ ವಿದ್ಯಾರ್ಥಿನಿಯರು ರಾಷ್ಟçಗೀತೆ, ವಂದೇಮಾತರA ಗೀತೆ ಮತ್ತು ರಾಷ್ಟಿçÃಯ ಭಾವೈಕ್ಯೆತೆಯ ಗೀತೆಗಳನ್ನು ಹಾಡಿದರು. ವಿದ್ಯಾರ್ಥಿನಿ ಕ್ಷೇಮಪಾಪಲನಾ ನಿರ್ದೇಶನಾಲಯದ ನಿರ್ದೇಶಕಿ ಪ್ರೊ.ಜ್ಯೋತಿ ಉಪಾಧ್ಯೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು

Address

Vijayapur
586108

Opening Hours

9am - 5pm

Website

Alerts

Be the first to know and let us send you an email when KSWU Media Cell posts news and promotions. Your email address will not be used for any other purpose, and you can unsubscribe at any time.

Shortcuts

Share